1222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ
ಬೆಂಗಳೂರು, ಜುಲೈ.15: ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿದ್ದ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾಗಿ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.
ಈ ಬಗ್ಗೆ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯು ಕ್ರಮ ಕೈಗೊಂಡಿದ್ದು, ಇದುವರೆಗೆ ಒಟ್ಟು 607 ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ. ಆಯ್ಕೆಯಾಗಿರುವ ಇನ್ನುಳಿದ ಅಭ್ಯರ್ಥಿಗಳ ಆಯ್ಕೆ ಸಿಂಧುತ್ವವನ್ನೂ ಪಡೆದಿದ್ದು, ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ, ಹುದ್ದೆಗಳ ಭರ್ತಿಗೆ ಸಹ ಕ್ರಮ ಕೈಗೊಂಡಿದೆ. ಇಲಾಖೆಯಲ್ಲಿ ಒಟ್ಟು 7057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021ನೇ ವರ್ಷದ ಅಂತ್ಯಕ್ಕೆ, ಸುಮಾರು 2627 ಹುದ್ದೆಗಳು ಖಾಲಿಯಾಗಲಿದ್ದು, ಪ್ರಸ್ತುತ ವರ್ಷ 1567 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳ ಸ್ಥಾಪನೆಗೆ ಸರ್ಕಾರ ವಿಶೇಷ ಕ್ರಮ ಕೈಗೊಂಡು, ನೂತನ ಕಟ್ಟಡಗಳೂ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಎಸ್ಎಸ್ಎಲ್ಸಿಯಿಂದ ಪಿಯುಸಿ ಹಾಗೂ ಸ್ನಾತಕಪೂರ್ವ ಪದವಿ ಪಾಸಾದವರೂ ಇಲಾಖೆಯ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆಗಳನ್ನು ನಡೆಸುವ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications