Get Updates
Get notified of breaking news, exclusive insights, and must-see stories!

1222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ

ಬೆಂಗಳೂರು, ಜುಲೈ.15: ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿದ್ದ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾಗಿ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯು ಕ್ರಮ ಕೈಗೊಂಡಿದ್ದು, ಇದುವರೆಗೆ ಒಟ್ಟು 607 ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ. ಆಯ್ಕೆಯಾಗಿರುವ ಇನ್ನುಳಿದ ಅಭ್ಯರ್ಥಿಗಳ ಆಯ್ಕೆ ಸಿಂಧುತ್ವವನ್ನೂ ಪಡೆದಿದ್ದು, ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ, ಹುದ್ದೆಗಳ ಭರ್ತಿಗೆ ಸಹ ಕ್ರಮ ಕೈಗೊಂಡಿದೆ. ಇಲಾಖೆಯಲ್ಲಿ ಒಟ್ಟು 7057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021ನೇ ವರ್ಷದ ಅಂತ್ಯಕ್ಕೆ, ಸುಮಾರು 2627 ಹುದ್ದೆಗಳು ಖಾಲಿಯಾಗಲಿದ್ದು, ಪ್ರಸ್ತುತ ವರ್ಷ 1567 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

1222 Recruitment Letter Issueing for Fire Brigade Candidates

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳ ಸ್ಥಾಪನೆಗೆ ಸರ್ಕಾರ ವಿಶೇಷ ಕ್ರಮ ಕೈಗೊಂಡು, ನೂತನ ಕಟ್ಟಡಗಳೂ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿಯಿಂದ ಪಿಯುಸಿ ಹಾಗೂ ಸ್ನಾತಕಪೂರ್ವ ಪದವಿ ಪಾಸಾದವರೂ ಇಲಾಖೆಯ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆಗಳನ್ನು ನಡೆಸುವ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+