Infosys Layoffs: ಇನ್ಫೋಸಿಸ್ ಮೈಸೂರು ಕ್ಯಾಂಪಸ್ನಲ್ಲಿ ಮತ್ತೆ ಟ್ರೈನಿಗಳ ವಜಾ
ಮೈಸೂರು, ಮಾರ್ಚ್ 27: ಬೆಂಗಳೂರು ಮೂಲದ ಇನ್ಫೋಸಿಸ್ ಟ್ರೈನಿಗಳ ವಜಾ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದೆ. ಕಂಪನಿಯ ಮೈಸೂರು ಕ್ಯಾಂಪಸ್ನಿಂದ ಪುನಃ 35 ರಿಂದ 40 ಟ್ರೈನಿಗಳನ್ನು ವಜಾಗೊಳಿಸಲಾಗಿದೆ ಎಂದು ವರದಿಗಳು ಹೇಳಿವೆ. ಈ ಹಿಂದೆ ಫೆಬ್ರವರಿಯಲ್ಲಿ ಟ್ರೈನಿಗಳನ್ನು ವಜಾಗೊಳಿಸಿದಾಗ ಕಾರ್ಮಿಕ ನೀತಿಗಳ ಉಲ್ಲಂಘನೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ತನಕ ದೂರುಗಳು ಸಲ್ಲಿಕೆಯಾಗಿತ್ತು.
ವಿವಿಧ ಮಾಧ್ಯಮಗಳ ವರದಿ ಪ್ರಕಾರ ಮೈಸೂರು ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಮಾರ್ಚ್ 26ರಂದು ನಡೆದ ಆಂತರಿಕ ಮೌಲ್ಯ ಮಾಪನ ಪರೀಕ್ಷೆಯ ಬಳಿಕ ಪರೀಕ್ಷೆಯಲ್ಲಿ ಪಾಸಾಗಲು ವಿಫಲರಾದ 35 ರಿಂದ 40 ತರಬೇತಿ ನಿರತ ಅಭ್ಯರ್ಥಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಆದರೆ ವರದಿಗಳ ಪ್ರಕಾರ ಈ ಬಾರಿ ವಜಾಗೊಂಡ ಟ್ರೈನಿಗಳಿಗೆ ಇನ್ಫೋಸಿಸ್ ಈ ಬಾರಿ ಬೇರೆ ವಿಭಾಗದಲ್ಲಿ ಕೆಲಸವನ್ನು ನೀಡಲಿದೆ. ಇನ್ಫೋಸಿಸ್ ವ್ಯವಹಾರ ಪ್ರಕ್ರಿಯೆ ನಿರ್ವಹಣೆ (ಬಿಪಿಎಂ)ನಲ್ಲಿ 12 ವಾರಗಳ ಕಾಲ ಕೆಲಸ ಮಾಡಲು ಸಹ ಅವಕಾಶವನ್ನು ನೀಡಲಿದೆ. ಬಿಪಿಎಂನಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಮತ್ತೊಂದು ತರಬೇತಿಯನ್ನು ನೀಡಲಾಗುತ್ತದೆ ಎಂದು ಕಂಪನಿ ಹೇಳಿದೆ.
ಟ್ರೈನಿಗಳ ವಜಾ ವಿಚಾರದಲ್ಲಿ ಸುದ್ದಿ: ಮೈಸೂರು ಇನ್ಫೋಸಿಸ್ ಕ್ಯಾಂಪಸ್ ಟ್ರೈನಿಗಳ ವಜಾ ವಿಚಾರದಲ್ಲಿ ಹಿಂದೆಯೂ ಸುದ್ದಿಯಾಗಿತ್ತು. 2.5 ವರ್ಷಗಳ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆಂತರಿಕ ಮೌಲ್ಯ ಮಾಪನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಲ್ಲ ಎಂದು ಫೆಬ್ರವರಿಯಲ್ಲಿ 350ಕ್ಕೂ ಅಧಿಕ ಟ್ರೈನಿಗಳನ್ನು ವಜಾಗೊಳಿಸಲಾಗಿತ್ತು.
ವಜಾಗೊಂಡ ಟ್ರೈನಿಗಳನ್ನು ಬಲವಂತವಾಗಿ ಕ್ಯಾಂಪಸ್ನಿಂದ ಆಚೆ ಕಳಿಸಲಾಗಿದೆ ಎಂದು ದೂರಲಾಗಿತ್ತು. ಆಗ ಇನ್ಫೋಸಿಸ್ ಕಾರ್ಮಿಕ ಹಿತಾಸಕ್ತಿ ನಿಯಮವನ್ನು ಉಲ್ಲಂಘನೆ ಮಾಡಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಹ ದೂರು ಸಲ್ಲಿಕೆ ಮಾಡಲಾಗಿತ್ತು. ಈ ದೂರಿನ ಕುರಿತು ವಿಚಾರಣೆ ನಡೆಸುವಂತೆ ಕರ್ನಾಟಕದ ಕಾರ್ಮಿಕ ಇಲಾಖೆಗೆ ಕೇಂದ್ರ ಸೂಚನೆಯನ್ನು ನೀಡಿತ್ತು.
ಈಗ ಇನ್ಫೋಸಿಸ್ ಟ್ರೈನಿಗಳನ್ನು ವಜಾಗೊಳಿಸಿ ಬಳಿಕ ಇ-ಮೇಲ್ ಕಳಿಸಿದ್ದು, ನಿಮಗೆ ಹೆಚ್ಚುವರಿ ತಯಾರಿ ಸಮಯ, ಸಂಶಯ ನಿವಾರಣಾ ಸೂತ್ರಗಳು ಮತ್ತು ಹಲವಾರು ಮಾದರಿ ಮೌಲ್ಯಮಾಪನ ಅವಕಾಶಗಳಿದ್ದರೂ ನೀವು ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಅರ್ಹತಾ ಮಾನದಂಡಗಳನ್ನು ಪೂರೈಸಿಲ್ಲ ಎಂಬುದು ನಿಮ್ಮ ಅಂತಿಮ ಮೌಲ್ಯಮಾಪನ ಪ್ರಯತ್ನದ ಫಲಿತಾಂಶಗಳ ಘೋಷಣೆಯ ನಂತರ ತಿಳಿಯುತ್ತಿದೆ ಎಂದು ಹೇಳಿದೆ.
ಆದರೆ ವಜಾ ಪ್ರಕ್ರಿಯೆ ಕುರಿತು ಇನ್ಫೋಸಿಸ್ನಿಂದ ಯಾವುದೇ ಪ್ರತಿಕ್ರಿಯೆ ನೀಡಲಾಗಿಲ್ಲ. ಅಲ್ಲದೇ ಇ-ಮೇಲ್ನಲ್ಲಿ ಭಾರತದ ಎರಡನೇ ಅತಿ ದೊಡ್ಡ ಐಟಿ ಸೇವಾ ಕಂಪನಿಯು ತರಬೇತಿ ಪಡೆದು ಬಿಡುಗಡೆ ಹೊಂದುತ್ತಿರುವವರಿಗೆ ಪ್ರಮಾಣ ಪತ್ರದ ಜೊತೆಗೆ ಒಂದು ತಿಂಗಳ ವಿಶೇಷ ವೇತನ ಪಾವತಿಯನ್ನು ನೀಡುತ್ತಿದೆ ಎಂದು ತಿಳಿಸಿದೆ.
ಒಂದು ವೇಳೆ ತರಬೇತಿ ಪಡೆದ ಅಭ್ಯರ್ಥಿಗಳು ಇನ್ಫೋಸಿಸ್ ವ್ಯವಹಾರ ಪ್ರಕ್ರಿಯೆ ನಿರ್ವಹಣೆ (ಬಿಪಿಎಂ)ನಲ್ಲಿ ಕೆಲಸ ಮಾಡಲು ಇಚ್ಛಿಸದಿದ್ದಲ್ಲಿ ಅವರು ಬೆಂಗಳೂರು ನಗರಕ್ಕೆ ಸಂಚಾರ ನಡೆಸಲು ಸಾರಿಗೆ ವ್ಯವಸ್ಥೆಯನ್ನು ಮಾಡಲಾಗುತ್ತದೆ, ಸಾರಿಗೆ ಭತ್ಯೆಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೈಸೂರು ಕ್ಯಾಂಪಸ್ ಅನ್ನು ಖಾಲಿ ಮಾಡಬೇಕಾಗುತ್ತದೆ ಎಂದು ಹೇಳಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications