ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಸರ್ಕಾರದಿಂದ 400 ಎಂಜಿನಿಯರ್ಗಳ ನೇಮಕ
ನೀರಾವರಿ ಇಲಾಖೆಯು ಕನಿಷ್ಠ 1,000 ಎಂಜಿನಿಯರ್ಗಳ ನೇಮಕಾತಿಗೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಕಳುಹಿಸಿದ್ದು, ಅದರೆ ಆರ್ಥಿಕ ಇಲಾಖೆಯು 400 ಮಂದಿಯನ್ನು ನೇಮಿಸಿಕೊಳ್ಳಲು ಅನುಮತಿ ನೀಡಿದೆ.
ಬೆಂಗಳೂರು, ಫೆಬ್ರವರಿ 4: ರಾಜ್ಯದಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸಲು ಗುತ್ತಿಗೆ ಆಧಾರದ ಮೇಲೆ 400 ಎಂಜಿನಿಯರ್ಗಳ ನೇರ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕಾರಜೋಳ, ನೀರಾವರಿ ಇಲಾಖೆಯು ಕನಿಷ್ಠ 1,000 ಎಂಜಿನಿಯರ್ಗಳ ನೇಮಕಾತಿಗೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಕಳುಹಿಸಿದ್ದು, ಅದರೆ ಆರ್ಥಿಕ ಇಲಾಖೆಯು 400 ಮಂದಿಯನ್ನು ನೇಮಿಸಿಕೊಳ್ಳಲು ಅನುಮತಿ ನೀಡಿದೆ. ಈ 400 ಹುದ್ದೆಗಳಲ್ಲಿ 300 ಸಹಾಯಕ ಎಂಜಿನಿಯರ್ಗಳು ಮತ್ತು 100 ಕಿರಿಯ ಎಂಜಿನಿಯರ್ಗಳು ಸೇರಿದ್ದಾರೆ ಎಂದು ಅವರು ಹೇಳಿದರು.
ಹಲವಾರು ವರ್ಷಗಳಿಂದ ಆನ್ ಸೈಟ್ ಎಂಜಿನಿಯರ್ಗಳ ಕೊರತೆಯಿಂದಾಗಿ ಅನುಷ್ಠಾನಗೊಂಡ ಯೋಜನೆಗಳ ಮೇಲ್ವಿಚಾರಣೆಯಲ್ಲಿ ವಿಳಂಬವಾಗುತ್ತಿದೆ. ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಮಂಜೂರು ಮಾಡಿರುವುದು ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಕಳಸಾ-ಬಂಡೂರಿಯಂತಹ ಇತರ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ಪಡೆದಿರುವುದರಿಂದ ಇಲಾಖೆಗೆ ಸಿವಿಲ್ ಎಂಜಿನಿಯರ್ಗಳ ಅವಶ್ಯಕತೆಯಿದೆ ಎಂದು ಸಚಿವರು ವಿವರಿಸಿದರು.

ಇದರಿಂದ ಪರಿಸ್ಥಿತಿಯ ತುರ್ತು ಅನಿವಾರ್ಯ ಅರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲ ಸಮಯದ ಹಿಂದೆ ನೀರಾವರಿ ಇಲಾಖೆಯ ಸಭೆಯಲ್ಲಿ ಪರಿಶೀಲನೆ ನಡೆಸಿದ ನಂತರ ಎಂಜಿನಿಯರ್ಗಳ ನೇಮಕಾತಿ ಪ್ರಸ್ತಾವನೆಯನ್ನು ತೆರವುಗೊಳಿಸುವಂತೆ ಹಣಕಾಸು ಇಲಾಖೆಗೆ ಸೂಚಿಸಿದ್ದರು. ಒಂದು ವರ್ಷದಲ್ಲಿ ಅಪ್ಪರ್ ಭದ್ರಾ ಯೋಜನೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. 74 ಲಕ್ಷಕ್ಕೂ ಹೆಚ್ಚು ಜನರು ಇದರ ನೇರ ಪ್ರಯೋಜನ ಪಡೆಯಲಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ರಾಜ್ಯದಲ್ಲಿ ಬೃಹತ್ ನೀರಾವರಿ ಯೋಜನೆಗಳು ಹಲವು ಹಂತಗಳಲ್ಲಿ ಜಾರಿಯಾಗುತ್ತಿವೆ. ಹೀಗಾಗಿ ಎಂಜಿನಿಯರ್ಗಳ ಅಗತ್ಯ ತುಂಬಾ ಇದೆ. ಇಲಾಖೆಯಲ್ಲಿ 1000 ಎಂಜಿನಿಯರ್ಗಳ ಹುದ್ದೆ ಖಾಲಿ ಇದೆ. ಎಂಜಿನಿಯರ್ಗಳನ್ನು ತ್ವರಿತವಾಗಿ ನೇಮಿಸಿಕೊಳ್ಳಬೇಕಿರುವುದರಿಂದ ಕೆಪಿಎಸ್ಸಿ ಇಲ್ಲವೇ ಯಾವುದೇ ನೇಮಕಾತಿ ಆಯೋಗಕ್ಕೆ ಪ್ರಕ್ರಿಯೆಯನ್ನು ಕೊಡದೆ ಇಲಾಖೆಯಿಂದಲೇ ನೇರವಾಗಿ ನೇಮಕಾರಿ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯ ಸರ್ಕಾರದಲ್ಲಿ ಖಾಲಿ ಇದ್ದ ಶೇ.90ರಷ್ಟು ಬ್ಯಾಕ್ಲಾಗ್ ಹುದ್ದಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಮೆರಿಟ್ ಆಧಾರದಲ್ಲೇ ಈ ನೇಮಕಾತಿಗಳು ನಡೆದಿದೆ ಎಂದು ಅವರು ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications