ವಾರಕ್ಕೆ 90 ಗಂಟೆ ಕೆಲಸ: ಕೇಂದ್ರ ಸರ್ಕಾರ ಹೇಳುವುದೇನು?
ನವದೆಹಲಿ, ಫೆಬ್ರವರಿ 04: ದೇಶದಲ್ಲಿ ವಾರಕ್ಕೆ 70 ಗಂಟೆ ಕೆಲಸ, 90 ಗಂಟೆ ಕೆಲಸದ ಚರ್ಚೆಗಳು ಜೋರಾಗಿವೆ. ಈ ಕುರಿತು ಪ್ರಸ್ತಾಪ ಮಾಡಿದ್ದ ಉದ್ಯಮಿಗಳು ಟೀಕೆಗಳನ್ನು ಎದುರಿಸುವಂತಾಗಿದೆ. ಇಂತಹ ಸಮಯದಲ್ಲಿಯೇ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಉದ್ಯೋಗಿಗಳ ಕೆಲಸದ ಅವಧಿ ಕುರಿತು ಲಿಖಿತ ಉತ್ತರವನ್ನು ನೀಡಿದೆ. ಈ ಮೂಲಕ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದೆ.
ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಗೆ ಸೋಮವಾರ ಈ ಕುರಿತು ಲಿಖಿತ ಉತ್ತರವನ್ನು ನೀಡಿದ್ದಾರೆ. "ದೇಶದಲ್ಲಿ ವಾರದ ಕೆಲಸದ ಅವಧಿಯನ್ನು 70 ರಿಂದ 90 ಗಂಟೆಗೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಖಾಸಗಿ ಕಂಪನಿಗಳ ಮುಖ್ಯಸ್ಥರು ಕಳೆದ ಒಂದು ತಿಂಗಳಿನಿಂದ ಉದ್ಯೋಗಿಗಳ ವಾರದ ಕೆಲಸದ ಅವಧಿ ಏರಿಕೆ ಮಾಡುವ ಕುರಿತು ಮಾತನಾಡಿದ್ದರು. ಈ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಅಲ್ಲದೇ ಉದ್ಯಮಿಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಟೀಕಿಸಲಾಗಿತ್ತು.
ಸರ್ಕಾರ ಹೇಳಿದ್ದೇನು?; ಲೋಕಸಭೆ ಬಜೆಟ್ ಅಧಿವೇಶನ ನಡೆಯುತ್ತಿದೆ. ಕಲಾಪದಲ್ಲಿ ಸದಸ್ಯರು ಈ ಕುರಿತು ಕೇಳಿದ್ದ ಪ್ರಶ್ನೆಗೆ ಸರ್ಕಾರ ಉತ್ತರ ನೀಡಿದೆ. ವಾರದ ಕೆಲಸದ ಅವಧಿಯನ್ನು ಹೆಚ್ಚಳ ಮಾಡುವಂತಹ ಯಾವುದೇ ಪ್ರಸ್ತಾವನೆಗಳು ನಮ್ಮ ಮುಂದೆ ಇಲ್ಲ ಎಂದು ಸರ್ಕಾರ ತನ್ನ ಉತ್ತರದಲ್ಲಿ ಸ್ಪಷ್ಟಪಡಿಸಿದೆ.
ಸಚಿವರು ತಮ್ಮ ಉತ್ತರದಲ್ಲಿ, "ನೌಕರರು ಸಮವರ್ತಿ ಪಟ್ಟಿಯ ಅಡಿಯಲ್ಲಿ ಬರುವುದರಿಂದ ಕಾರ್ಮಿಕ ಕಾನೂನುಗಳಿಗೆ ಸಂಬಂಧಿಸಿದ ತೀರ್ಮಾನಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುತ್ತವೆ. ಕೆಲಸದ ಅವಧಿಯನ್ನು ವಾರದಲ್ಲಿ 70 ರಿಂದ 90ಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಇಲ್ಲ" ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಲೋಕಸಭೆಯಲ್ಲಿ ಮಂಡನೆ ಮಾಡಿದ್ದ ಆರ್ಥಿಕ ಸಮೀಕ್ಷೆ ವರದಿಯಲ್ಲಿ ವಾರದಲ್ಲಿ 60 ಗಂಟೆ ಕೆಲಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಉಲ್ಲೇಖಿಸಲಾಗಿತ್ತು.
12 ಗಂಟೆಗಳಿಗೂ ಅಧಿಕ ಕಾಲ ಕುಳಿತು ಕೆಲಸ ಮಾಡುವವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಾರೆ. ಇದರಿಂದಾಗಿ ಆರ್ಥಿಕ ನಷ್ಟವೂ ಉಂಟಾಗಲಿದೆ ಎಂದು ಸಮೀಕ್ಷೆ ತಿಳಿಸಿತ್ತು. ಉದ್ಯೋಗಿಗಳ ಕೆಲಸದ ಅವಧಿ ಸೇರಿದಂತೆ ಇತರ ವಿಷಯಗಳು ಕಾರ್ಖಾನೆ ಕಾಯ್ದೆ 1948, ಅಂಗಡಿ ಮತ್ತು ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನಿರ್ಧರಿತವಾಗುತ್ತದೆ.
2023ರಲ್ಲಿ ಬಿಡುಗಡೆಯಾದ ಸ್ಲ್ಯಾಕ್ ಸಂಸ್ಥೆಯ ಸಮೀಕ್ಷೆ ವರದಿ ಹೆಚ್ಚು ಹೊತ್ತು ಕಛೇರಿಯಲ್ಲಿ ಇರುವ ಉದ್ಯೋಗಿಗಳಿಗಿಂತ ನಿಗದಿತ ಸಮಯಕ್ಕೆ ಕಛೇರಿಯಿಂದ ಹೊರಡುವ ಉದ್ಯೋಗಿಗಳ ಕೆಲಸದ ಗುಣಮಟ್ಟ ಉತ್ತಮವಾಗಿದೆ ಎಂದು ಹೇಳಿತ್ತು.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಕೆಲವು ದಿನಗಳ ಹಿಂದೆ ಭಾರತೀಯ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ನೀಡಿದ ಹೇಳಿಕೆ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ನಡುವೆ ವಾರಕ್ಕೆ 90 ಗಂಟೆ ದುಡಿಯಬೇಕು, ರವಿವಾರವೂ ದುಡಿಯಬೇಕು, ಮನೆಯಲ್ಲಿದ್ದು ಹೆಂಡತಿಯ ಮುಖವನ್ನು ದಿಟ್ಟಿಸುವುದೇನಿದೆ ಎಂದು ಲಾರ್ಸೆನ್ ಆ್ಯಂಡ್ ಟೂಬ್ರೊ ಇನ್ಫೊಟೆಕ್ ಅಧ್ಯಕ್ಷ ಸುಬ್ರಹ್ಮಣ್ಯನ್ ಹೇಳಿಕೆ ನೀಡಿ ಈ ಚರ್ಚೆಯ ಬಿಸಿಯನ್ನು ಮತ್ತಷ್ಟು ಹೆಚ್ಚಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications