ವಾರಕ್ಕೆ 90 ಗಂಟೆ ಕೆಲಸ: ಕೇಂದ್ರ ಸರ್ಕಾರ ಹೇಳುವುದೇನು?
ನವದೆಹಲಿ, ಫೆಬ್ರವರಿ 04: ದೇಶದಲ್ಲಿ ವಾರಕ್ಕೆ 70 ಗಂಟೆ ಕೆಲಸ, 90 ಗಂಟೆ ಕೆಲಸದ ಚರ್ಚೆಗಳು ಜೋರಾಗಿವೆ. ಈ ಕುರಿತು ಪ್ರಸ್ತಾಪ ಮಾಡಿದ್ದ ಉದ್ಯಮಿಗಳು ಟೀಕೆಗಳನ್ನು ಎದುರಿಸುವಂತಾಗಿದೆ. ಇಂತಹ ಸಮಯದಲ್ಲಿಯೇ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಉದ್ಯೋಗಿಗಳ ಕೆಲಸದ ಅವಧಿ ಕುರಿತು ಲಿಖಿತ ಉತ್ತರವನ್ನು ನೀಡಿದೆ. ಈ ಮೂಲಕ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದೆ.
ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಗೆ ಸೋಮವಾರ ಈ ಕುರಿತು ಲಿಖಿತ ಉತ್ತರವನ್ನು ನೀಡಿದ್ದಾರೆ. "ದೇಶದಲ್ಲಿ ವಾರದ ಕೆಲಸದ ಅವಧಿಯನ್ನು 70 ರಿಂದ 90 ಗಂಟೆಗೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಖಾಸಗಿ ಕಂಪನಿಗಳ ಮುಖ್ಯಸ್ಥರು ಕಳೆದ ಒಂದು ತಿಂಗಳಿನಿಂದ ಉದ್ಯೋಗಿಗಳ ವಾರದ ಕೆಲಸದ ಅವಧಿ ಏರಿಕೆ ಮಾಡುವ ಕುರಿತು ಮಾತನಾಡಿದ್ದರು. ಈ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಅಲ್ಲದೇ ಉದ್ಯಮಿಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಟೀಕಿಸಲಾಗಿತ್ತು.
ಸರ್ಕಾರ ಹೇಳಿದ್ದೇನು?; ಲೋಕಸಭೆ ಬಜೆಟ್ ಅಧಿವೇಶನ ನಡೆಯುತ್ತಿದೆ. ಕಲಾಪದಲ್ಲಿ ಸದಸ್ಯರು ಈ ಕುರಿತು ಕೇಳಿದ್ದ ಪ್ರಶ್ನೆಗೆ ಸರ್ಕಾರ ಉತ್ತರ ನೀಡಿದೆ. ವಾರದ ಕೆಲಸದ ಅವಧಿಯನ್ನು ಹೆಚ್ಚಳ ಮಾಡುವಂತಹ ಯಾವುದೇ ಪ್ರಸ್ತಾವನೆಗಳು ನಮ್ಮ ಮುಂದೆ ಇಲ್ಲ ಎಂದು ಸರ್ಕಾರ ತನ್ನ ಉತ್ತರದಲ್ಲಿ ಸ್ಪಷ್ಟಪಡಿಸಿದೆ.
ಸಚಿವರು ತಮ್ಮ ಉತ್ತರದಲ್ಲಿ, "ನೌಕರರು ಸಮವರ್ತಿ ಪಟ್ಟಿಯ ಅಡಿಯಲ್ಲಿ ಬರುವುದರಿಂದ ಕಾರ್ಮಿಕ ಕಾನೂನುಗಳಿಗೆ ಸಂಬಂಧಿಸಿದ ತೀರ್ಮಾನಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುತ್ತವೆ. ಕೆಲಸದ ಅವಧಿಯನ್ನು ವಾರದಲ್ಲಿ 70 ರಿಂದ 90ಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಇಲ್ಲ" ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಲೋಕಸಭೆಯಲ್ಲಿ ಮಂಡನೆ ಮಾಡಿದ್ದ ಆರ್ಥಿಕ ಸಮೀಕ್ಷೆ ವರದಿಯಲ್ಲಿ ವಾರದಲ್ಲಿ 60 ಗಂಟೆ ಕೆಲಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಉಲ್ಲೇಖಿಸಲಾಗಿತ್ತು.
12 ಗಂಟೆಗಳಿಗೂ ಅಧಿಕ ಕಾಲ ಕುಳಿತು ಕೆಲಸ ಮಾಡುವವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಾರೆ. ಇದರಿಂದಾಗಿ ಆರ್ಥಿಕ ನಷ್ಟವೂ ಉಂಟಾಗಲಿದೆ ಎಂದು ಸಮೀಕ್ಷೆ ತಿಳಿಸಿತ್ತು. ಉದ್ಯೋಗಿಗಳ ಕೆಲಸದ ಅವಧಿ ಸೇರಿದಂತೆ ಇತರ ವಿಷಯಗಳು ಕಾರ್ಖಾನೆ ಕಾಯ್ದೆ 1948, ಅಂಗಡಿ ಮತ್ತು ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನಿರ್ಧರಿತವಾಗುತ್ತದೆ.
2023ರಲ್ಲಿ ಬಿಡುಗಡೆಯಾದ ಸ್ಲ್ಯಾಕ್ ಸಂಸ್ಥೆಯ ಸಮೀಕ್ಷೆ ವರದಿ ಹೆಚ್ಚು ಹೊತ್ತು ಕಛೇರಿಯಲ್ಲಿ ಇರುವ ಉದ್ಯೋಗಿಗಳಿಗಿಂತ ನಿಗದಿತ ಸಮಯಕ್ಕೆ ಕಛೇರಿಯಿಂದ ಹೊರಡುವ ಉದ್ಯೋಗಿಗಳ ಕೆಲಸದ ಗುಣಮಟ್ಟ ಉತ್ತಮವಾಗಿದೆ ಎಂದು ಹೇಳಿತ್ತು.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಕೆಲವು ದಿನಗಳ ಹಿಂದೆ ಭಾರತೀಯ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ನೀಡಿದ ಹೇಳಿಕೆ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ನಡುವೆ ವಾರಕ್ಕೆ 90 ಗಂಟೆ ದುಡಿಯಬೇಕು, ರವಿವಾರವೂ ದುಡಿಯಬೇಕು, ಮನೆಯಲ್ಲಿದ್ದು ಹೆಂಡತಿಯ ಮುಖವನ್ನು ದಿಟ್ಟಿಸುವುದೇನಿದೆ ಎಂದು ಲಾರ್ಸೆನ್ ಆ್ಯಂಡ್ ಟೂಬ್ರೊ ಇನ್ಫೊಟೆಕ್ ಅಧ್ಯಕ್ಷ ಸುಬ್ರಹ್ಮಣ್ಯನ್ ಹೇಳಿಕೆ ನೀಡಿ ಈ ಚರ್ಚೆಯ ಬಿಸಿಯನ್ನು ಮತ್ತಷ್ಟು ಹೆಚ್ಚಿಸಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications