ಬೀದರ್ನಲ್ಲಿ ಅಗ್ನಿಪಥ್ ನೇಮಕಾತಿ ರ್ಯಾಲಿ
ಬೀದರ್, ಆಗಸ್ಟ್. 3: ಬೆಂಗಳೂರಿನ ನೇಮಕಾತಿ ವಲಯದ ಪ್ರಧಾನ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಬೀದರ್ನ ನೆಹರು ಸ್ಟೇಡಿಯಂನಲ್ಲಿ 2022ರ ಡಿಸೆಂಬರ್ 5 ರಿಂದ 22ರ ವರೆಗೆ ಅಗ್ನಿಪಥ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ 10ನೇ ತರಗತಿ ತೇರ್ಗಡೆ, ಅಗ್ನಿವೀರ್ ಟ್ರೇಡ್ಸ್ಮೆನ್ 8ನೇ ತರಗತಿ ತೇರ್ಗಡೆ, ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ಲಿಕಲ್ ವಿಭಾಗಗಳಿಗೆ ನೇಮಕಾತಿ ರ್ಯಾಲಿ ನಡೆಯಲಿದೆ.
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ನಿರ್ದೇಶಕ ಕರ್ನಲ್ ನಿಶಾಂತ ಶೆಟ್ಟಿ ತಿಳಿಸಿದ್ದಾರೆ.

ಅಭ್ಯರ್ಥಿಗಳು 2022ರ ಆಗಸ್ಟ್ 5 ರಿಂದ ಸೆಪ್ಟೆಂಬರ್ 3ರ ವರೆಗೆ joinindianarmy.nic.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅವರ ನೋಂದಾಯಿತ ಇ-ಮೇಲ್ ವಿಳಾಸಕ್ಕೆ 2022ರ ನವೆಂಬರ್ 10 ರಿಂದ 20ರವರೆಗೆ ಕಳುಹಿಸಲಾಗುತ್ತದೆ.
ನೇಮಕಾತಿ, ವಯೋಮಿತಿ, ವಿದ್ಯಾರ್ಹತೆ ಹಾಗೂ ಇತರೆ ಮಾನದಂಡ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವೀಕ್ಷಿಸಲು ಕೋರಿದೆ.

ಬೆಂಗಳೂರು ಭೂಸೇನಾ ಭರ್ತಿ ಕಾರ್ಯಾಲಯ ಇವರ ವತಿಯಿಂದ 'ಅಗ್ನಿವೀರ್' ಸೇನಾ ನೇಮಕಾತಿ ರ್ಯಾಲಿಯು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲೂ ನಡೆಯಲಿದೆ. ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications