ಅಗ್ನಿಪಥ್ ಯೋಜನೆ; ವಾಯುಪಡೆಗೆ 7.5 ಲಕ್ಷ ಅರ್ಜಿ
ನವದೆಹಲಿ ಜು.6: ಅಗ್ನಿಪಥ್ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭಿಸಿದ ಜೂನ್ 24ರಿಂದ ಈವರೆಗೆ ಒಟ್ಟು 7.5 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ಬುಧವಾರ ತಿಳಿಸಿದೆ.
ಕಳೆದ ತಿಂಗಳು ಜೂನ್ 24ರಿಂದ ಆರಂಭವಾಗಿದ್ದ ಅಗ್ನಿವೀರ್ ನೋಂದಣಿ ಪ್ರಕ್ರಿಯೆ ಮಂಗಳವಾರ ಕೊನೆಗೊಂಡಿದೆ. ಅಗ್ನಿಪಥ್ ಯೋಜನೆಯನ್ನು ಜೂನ್ 14 ರಂದು ಘೋಷಿಸಿದ ನಂತರ ಸುಮಾರು ಒಂದು ವಾರ ದೇಶದ ವಿವಿಧ ರಾಜ್ಯಗಳಲ್ಲಿ ಹಿಂಸಾಚಾರ, ಪ್ರತಿಭಟನೆಗಳು ನಡೆದಿದ್ದವು.
ಈ ಯೋಜನೆಯಿಂದ ದೇಶದ ಯುವಕರ ಭವಿಷ್ಯಕ್ಕೆ ತೊಂದರೆ ಉಂಟಾಗಲಿದೆ ಎಂದು ಆರೋಪಿಸಲಾಗಿತ್ತು. ಪ್ರತಿ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಯೋಜನೆ ಹಿಂಪಡೆಯುವಂತೆ ಆಗ್ರಹಿಸಿದ್ದರು. ಕೇಂದ್ರ ಸರ್ಕಾರ ನಡೆ ಕುರಿತು ಟೀಕಿಸಿದ್ದರು.

ವಾಯುಪಡೆಗೆ 7,49,899 ಅರ್ಜಿ ಸಲ್ಲಿಕೆ; ಭಾರತೀಯ ವಾಯುಪಡೆ ಅಗ್ನಿಪಥ್ ನೇಮಕಾತಿ ಯೋಜನೆ ಯಡಿ ನಡೆಸಿದ ಆನ್ಲೈನ್ ನೋಂದಣಿ ಪ್ರಕ್ರಿಯೆ ಮಂಗಳವಾರ ಪೂರ್ಣಗೊಂಡಿದೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದೆ. ಈ ಹಿಂದೆ 6,31,528 ಅರ್ಜಿಗಳು ಸಲ್ಲಿಕೆ ಆಗಿದ್ದವು. ಅವುಗಳೇ ಹೆಚ್ಚು ಎನ್ನಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ಇತರ ಸೇನಾಪಡೆಗಳ ನೇಮಕಾತಿಗಳ ಸುತ್ತಿನಲ್ಲಿ ಅತ್ಯಧಿಕ 7,49,899 ಅರ್ಜಿಗಳು ವಾಯುಪಡೆಗೆ ಸಲ್ಲಿಕೆ ಗೆ ಆಗಿವೆ ಎಂದು ತಿಳಿದು ಬಂದಿದೆ.
ಅಗ್ನಿಪಥ್ ನೇಮಕಾತಿ ಯೋಜನೆಯಡಿ 17.5ವರ್ಷದಿಂದ 21 ವರ್ಷ ವಯಸ್ಸಿನವರೆಗಿನ ಯುವಕರು ಅರ್ಜಿ ಸಲ್ಲಿಕೆ/ ಆನ್ ಲೈನ್ ನೋಂದಣಿಗೆ ಅರ್ಹರಾಗಿರುತ್ತಾರೆ. ಇವರು ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಅವಧಿಗೆ ಕಾರ್ಯ ನಿರ್ವಹಿಸಲಿದ್ದಾರೆ. ಆಯ್ಕೆಯಾಗುವವರ ಪೈಕಿ ಸುಮಾರು ಶೇ.25 ಜನರನ್ನು ನಾಲ್ಕು ವರ್ಷದ ಸೇವೆ ಬಳಿಕ ಪೂರ್ಣಾವಧಿ ಸೇವೆಗೆ ಮುಂದುವರಿಸಲಾಗುವುದು ಎಂದು ರಕ್ಷಣಾ ಇಲಾಖೆ ತಿಳಿಸಿದೆ.
The online registration process conducted by IAF towards the #AgnipathRecruitmentScheme has been completed. Compared to 6,31,528 applications in the past, which was the highest in any recruitment cycle, this time 7,49,899 applications have been received: Indian Air Force (IAF) pic.twitter.com/BVidF3lfaf
— ANI (@ANI) July 6, 2022
ಯೋಜನೆ ವಿರೋಧಿಗಳನ್ನು ಪರಿಗಣಿಸಲ್ಲ
ಜೊತೆಗೆ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧ ದೇಶದ ಯಾವುದೇ ಮೂಲಗಳಲ್ಲಿ ಹಿಂಸಾತ್ಮಕ ಕೃತ್ಯಕ್ಕೆ ಇಲ್ಲವೇ ಪ್ರತಿಭಟನೆಗೆ ಪ್ರಚೋದನೆ ನೀಡುವ ಯುವಕರನ್ನು ಪರಿಗಣಿಸಲಾಗುವುದಿಲ್ಲ. ಅಂತವರನ್ನು ಸಶಸ್ತ್ರ ಪಡೆಗಳಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ರಕ್ಷಣಾ ಇಲಾಖೆ, ಸೇನಾಪಡೆಗಳ ಮುಖ್ಯಸ್ಥರು ತಿಳಿಸಿದ್ದಾರೆ.

ಮೊದಲು 17.5ರಿಂದ 21ವರ್ಷ ವಯಸ್ಸಿನ ಮಿತಿ ಇಡಲಾಗಿತ್ತು. ನಂತರ ಜೂ.16ರಂದು ಅದನ್ನು ಗರಿಷ್ಠ 21 ರಿಂದ 23 ವರ್ಷಗಳಿಗೆ ಹೆಚ್ಚಿಸಲಾಯಿತು. ಬಳಿಕ ಕೇಂದ್ರ ಅರೆಸೇನಾ ಪಡೆ ಮತ್ತು ರಕ್ಷಣಾ ಪಡೆಗಳಲ್ಲಿ ಅಗ್ನಿವೀರರು ಆದ್ಯತೆ ಮೇರೆಗೆ ಕಾರ್ಯನಿರ್ವಹಣೆ ಕೈಗೊಳ್ಳಲಾಗುವ ಕ್ರಮ ಕುರಿತು ಘೋಷಿಸಲಾಗಿತು. ಅಲ್ಲದೇ ಕೆಲವು ಸಾರ್ವಜನಿಕ ಉದ್ಯಮಗಳು ನಿವೃತ್ತಿ ನಂತರ ಅಗ್ನಿವೀರರಿಗೆ ಇರುವ ಉದ್ಯೋಗವಕಾಶಗಳು ಬಗ್ಗೆ ಸ್ಪಷ್ಟಪಡಿಸಿದ್ದವು.
ಸಾಲದೆಂಬಂತೆ ಅಗ್ನಿಪಥ್ ಯೋಜನೆಯಡಿ ಸಶಸ್ತ್ರ ಪಡೆಗೆ ಸೇರಿ ಸೇವೆ ಸಲ್ಲಿಸಿದ ಅಗ್ನಿವೀರ ಸೈನಿಕರನ್ನು ರಾಜ್ಯದ ಪೊಲೀಸ್ ಪಡೆಗಳಲ್ಲಿ ನೇಮಕ ಮಾಡಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಆಡಳಿತದಲ್ಲಿರುವ ಹಲವು ರಾಜ್ಯಗಳು ಈಗಾಗಲೇ ಘೋಷಿಸಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications