ಅಗ್ನಿಪಥ್; ನ.1ರಿಂದ ಕರ್ನಾಟಕದಲ್ಲಿ ಮಹಿಳಾ ಅಭ್ಯರ್ಥಿ ನೇಮಕ
ಬೆಂಗಳೂರು, ಆಗಸ್ಟ್ 10: ಅಗ್ನಿಪಥ್ ಯೋಜನೆಯಡಿ ಕರ್ನಾಟಕದಲ್ಲಿ ನವೆಂಬರ್ 1ರಿಂದ 3ರವರೆಗೆ ಮಿಲಿಟರಿ ಪೊಲೀಸರ ಸಾಮಾನ್ಯ ಕರ್ತವ್ಯ ವಿಭಾಗದಡಿ ಮಹಿಳಾ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.
ಕೇಂದ್ರ ರಕ್ಷಣಾ ಇಲಾಖೆ ಮಾಹಿತಿ ಪ್ರಕಾರ, ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ಹಾಗೂ ಮಾಹೆಯ ಸ್ವಯಂ ಸೇವಕ ಮಹಿಳಾ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.
ಈ ನೇಮಕಾತಿ ಪ್ರಕ್ರಿಯೆಯು ಪ್ರಧಾನ ಕಛೇರಿ ನೇಮಕಾತಿ ವಲಯದ ಆಶ್ರಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಸೈನ್ಯದಲ್ಲಿನ ಸೇನಾ ಪೊಲೀಸ್ ಕಾರ್ಪ್ಸ ವಿಭಾಗದಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳೆಯರು) ನೋಂದಣಿಗಾಗಿ ರ್ಯಾಲಿ ನಡೆಸಲಾಗುತ್ತಿದೆ. ಇನ್ನು ಆಗಸ್ಟ್ 7ರಂದು ಬೆಂಗಳೂರಿನಲ್ಲಿರುವ ಹೆಡ್ ಕ್ವಾಟ್ರರ್ಸ್ ರಿಕ್ರೂಟಿಂಗ್ ಝೋನ್ ಹೊರಡಿಸಿದ ಅಧಿಸೂಚನೆಯಲ್ಲಿ ಸೇನೆಗೆ ನಿಗದಿತ ವಿಭಾಗಕ್ಕೆ ಸೇರ್ಪಡೆಯಾಗಲು ವಯೋಮಿತಿ, ಶೈಕ್ಷಣಿಕ ಅರ್ಹತೆ ಸೇರಿದಂತೆ ಇನ್ನಿತರ ಮಾನದಂಡಗಳ ವಿವರಗಳನ್ನು ಸಮಗ್ರವಾಗಿ ನೀಡಲಾಗಿದೆ.
ಆನ್ಲೈನ್ ಮೂಲಕ ನೋಂದಣಿ; ಮಹಿಳಾ ಅಗ್ನಿವೀರ್ ನೇಮಕಾತಿ 2022ಕ್ಕೆ ವಯಸ್ಸಿನ ಮಿತಿಯು 17.5ವರ್ಷದಿಂದ 23ವರ್ಷ ತುಂಬಿರಬೇಕು. ಆನ್ಲೈನ್ ನೋಂದಣಿ ಮಾಡಿಕೊಳ್ಳುವವರಿಗೆ ಆಗಸ್ಟ್ 10ರಿಂದ ಸೆಪ್ಟೆಂಬರ್ 7ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಮಹಿಳಾ ಅಭ್ಯರ್ಥಿಗಳು ತಮ್ಮ ನೋಂದಣಿಗೆ www.Joinindianarmy.nic.in ವೆಬ್ಸೈಟ್ಗೆ ಭೇಟಿ ನೀಡಬೇಕು.

ನೋಂದಣಿಯಲ್ಲಿ ಯಶಸ್ವಿಯಾಗುವ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡ್ಗಳನ್ನು ಅವರ ಇ-ಮೇಲ್ ಅಕ್ಟೋಬರ್ 12 ಇಲ್ಲವೇ 13ರಂದು ಕಳಹಿಸಲಾಗುವುದು ಎಂದು ಕೇಂದ್ರ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications