ಹಾವೇರಿ; ಅಗ್ನಿವೀರರ ನೇಮಕಾತಿಗಾಗಿ ರ್ಯಾಲಿ
ಹಾವೇರಿ, ಆಗಸ್ಟ್. 1: ಹಾವೇರಿ ನಗರದಲ್ಲಿ ಆಗಸ್ಟ್ 1ರಿಂದ ಕೇಂದ್ರ ಸರ್ಕಾರದ ನೂತನ ಯೋಜನೆ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ರ್ಯಾಲಿ ನಡೆಯಲಿದೆ.
ಸೆಪ್ಟೆಂಬರ್ 1 ರಿಂದ 20ರವರೆಗೆ ಅಗ್ನಿವೀರರ ನೇಮಕಾತಿ ರ್ಯಾಲಿ ನಡೆಯಲಿದ್ದು, ರ್ಯಾಲಿಗೆ ಅಗತ್ಯವಿರುವ ಉಪಕರಣಗಳು ಸೇರಿದಂತೆ ಮೂಲಸೌಕರ್ಯಗಳ ಸಿದ್ಧತೆಗೆ ಸಂಬಂಧಿತ ಅಧಿಕಾರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಈಗಾಗಲೇ ಸೂಚನೆ ನೀಡಿದ್ದಾರೆ.
ಈ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಗ್ನಿಪತ್ ನೇಮಕಾತಿ ರ್ಯಾಲಿ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಡಿಸಿ ಹೊಸಮನಿ ಸಿದ್ದಪ್ಪ ಸಭೆ ನಡೆಸಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರರ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ನಡೆಸಲು ಸ್ಥಳ ನಿಗದಿಪಡಿಸಲಾಗಿದೆ.
ಅಗ್ನಿಪಥ ಯೋಜನೆಯಡಿ ಅಗ್ನಿವೀರರ ನೇಮಕ ಮಾಡಿಕೊಳ್ಳು ಸೇನೆಯಿಂದ ಸರ್ಕಾರದಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ 50 ಸಾವಿರದಷ್ಟು ಇದಕ್ಕೆ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ನಿತ್ಯವು 2500 ರಿಂದ 3000 ಜನರು ಅಗ್ನಿವೀರರ ನೇಮಕಾತಿಗೆ ಅಭ್ಯರ್ಥಿಗಳು ಆಗಮಿಸುತ್ತಿದ್ದಾರೆ.
ಭಾರತೀಯ ಸೇನಾ ನೇಮಕಾತಿ ವಿಭಾಗದಿಂದ ಅಧಿಕಾರಿಗಳು ಈಗಾಗಲೇ ಆಗಮಿಸಲಿದ್ದಾರೆ. ಬರುವ ಎಲ್ಲರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸಾರಿಗೆ, ವಸತಿ, ಸ್ವಚ್ಛತೆ, ಸೇನಾ ನಿಯಮಗಳಿಗೆ ಅನುಗುಣವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧತೆ ಕಾರ್ಯವನ್ನು ಸಹ ಜಿಲ್ಲೆಯ ಅಧಿಕಾರಿಗಳು ಕೈಗೊಳ್ಳಬೇಕು. ಸೇನಾ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳ ನಿಯಮ ಹಾಗೂ ಮಾರ್ಗದರ್ಶನದಂತೆ ವ್ಯವಸ್ಥೆ ಮಾಡಬೇಕು ಎಂದು ಡಿಸಿ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

11 ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ
ಆಗಸ್ಟ್ 1ರಿಂದ 20 ದಿನಗಳ ಕಾಲ ನಡೆಯುವ ನೇಮಕಾತಿ ರ್ಯಾಲಿಯಲ್ಲಿ ರಾಜ್ಯದ ಸುಮಾರು 11 ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ನೇಮಕಾತಿಗಾಗಿ ಬರುವ ವಿವಿಧ ಜಿಲ್ಲೆಯ ಅಭ್ಯರ್ಥಿಗಳಿಗೆ ಸಾರಿಗೆಗೆ ಯಾವುದೇ ತೊಂದರೆಯಾಗದಂತೆ ವಿಶೇಷವಾಗಿ ಹುಬ್ಬಳ್ಳಿ ಮತ್ತು ದಾವಣಗೆರೆಯಿಂದ ಹಾವೇರಿಗೆ ಹೆಚ್ಚುವರಿ ಸಾರಿಗೆ ಸಂಪರ್ಕ ಕಲ್ಪಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕರ್ನಾಟಕ ವಾಯವ್ಯ ರಸ್ತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪ್ರತಿದಿನ 3000 ಅಭ್ಯರ್ಥಿಗಳ ದೈಹಿಕ ಪರೀಕ್ಷೆ
ಸಭೆಯಲ್ಲಿ ಅಗ್ನಿಪಥ್ ನೇಮಕಾತಿ ವಿಭಾಗದ ಅಧಿಕಾರಿ ಸುನೀಲಕುಮಾರ್ ಮಾತನಾಡಿ, ಆಗಸ್ಟ್ 1ರಿಂದ ಆರಂಭವಾಗುವ ರ್ಯಾಲಿಯಲ್ಲಿ 50 ರಿಂದ 60ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿದಿನ 2500 ರಿಂದ 3000 ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಅಲ್ಲದೆ ದಾಖಲೆಗಳ ಪರಿಶೀಲನೆಯೂ ನಡೆಯುತ್ತದೆ. ಕ್ರೀಡಾಂಗಣದ ಒಳಭಾಗದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು. ಹೊರ ಆವರಣದಲ್ಲಿ ಅಭ್ಯರ್ಥಿಗಳಿಗೆ ಶಾಮಿಯಾನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ರ್ಯಾಲಿ
ಬೆಂಗಳೂರು ಭೂಸೇನಾ ಭರ್ತಿ ಕಾರ್ಯಾಲಯ ಇವರ ವತಿಯಿಂದ 'ಅಗ್ನಿವೀರ್' ಸೇನಾ ನೇಮಕಾತಿ ರ್ಯಾಲಿಯು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ.

www.joinindianarmy.nic.in ಗೆ ಭೇಟಿ ನೀಡಿ
17 1/2 ರಿಂದ 23 ವರ್ಷ ಪ್ರಾಯದ ಅರ್ಹ ಪುರುಷ ಅಭ್ಯರ್ಥಿಗಳು ಜಾಲತಾಣದಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ರ್ಯಾಲಿಯ ಮುಂಚಿತವಾಗಿ ಇಮೇಲ್ ಮುಖಾಂತರ ಅಡ್ಮಿಟ್ ಕಾರ್ಡು ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗೆ ಜಾಲತಾಣ www.joinindianarmy.nic.in ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications