ಸಂದರ್ಶನದ ಮೂಲಕ ಪ್ರಥಮ ದರ್ಜೆ ಕಾಲೇಜು ಬೋಧಕರ ಹುದ್ದೆ ಭರ್ತಿ
ಬೆಂಗಳೂರು, ಏಪ್ರಿಲ್ 03; ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆಯ್ಕೆ ಸಮಿತಿ ಮೂಲಕ ಸಂದರ್ಶನ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಸಂದರ್ಶನಕ್ಕೆ 110 ಅಂಕಗಳನ್ನು ನಿಗದಿ ಮಾಡಲಾಗಿದೆ.
ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಿನಾಂಕ 31/12/2015ರೊಳಗೆ ವಿವಿಧ ಕಾರಣಗಳಿಂದ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಆಯ್ಕೆ ಸಮಿತಿ ಮೂಲಕ ಸಂದರ್ಶನ ನಡೆಸಿ ಭರ್ತಿ ಮಾಡುವ ಸಂಬಂಧ ಆಡಳಿತ ಮಂಡಳಿಗಳಿಗೆ ಕೆಲವೊಂದು ಷರತ್ತು/ ಮಾನದಂಡಗಳನ್ನು ನಿಗದಿಪಡಿಸುವ ಕುರಿತು ಸರ್ಕಾರದ ಆದೇಶ ಕೋರಲಾಗಿತ್ತು.

ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ಕಾರಣಗಳಿಂದ ದಿನಾಂಕ 31/12/2015ರೊಳಗೆ ಖಾಲಿಯಾಗಿರುವ ಬೋಧಕರ ಹುದ್ದೆಗಳನ್ನು ಉಪಲಬ್ದ ಕಾರ್ಯಭಾರದ ಆಧಾರದ ಮೇಲೆ ನಿಯಮಾನುಸಾರ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ.
ಸರ್ಕಾರದ ಪತ್ರದಲ್ಲಿ ಆರ್ಥಿಕ ಇಲಾಖೆಯು ನಿಗದಿಪಡಿಸಿರುವ ಚೆಕ್ಲಿಸ್ಟ್ನಂತೆ ವಿದ್ಯಾರ್ಹತೆ ಮೀಸಲಾತಿ, ಕಾರ್ಯಭಾರದ ಆಧಾರದ ಮೇಲೆ ನಿಯಮಾನುಸಾರ ಪರಿಶೀಲಿಸಿ ಖಾಲಿಯಿರುವ ಹುದ್ದೆಗಳನ್ನು ಖಾಸಗಿ ಅನುದಾನಿತ (ಪದವಿ ಕಾಲೇಜು) ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಇಲಾಖೆಯು ನಿಗದಿಪಡಿಸಿರುವ ಮಾನದಂಡಗಳನ್ವಯ ಪಾರದರ್ಶಕವಾಗಿ ಖಾಲಿ ಹುದ್ದೆ ಭರ್ತಿ ಮಾಡಲು ನಿಯಮಾನುಸಾರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸುವ ಬಗ್ಗೆ ಅನುಮತಿ ನೀಡಲು ಆಯುಕ್ತರು, ಕಾಲೇಜು & ತಾಂತ್ರಿಕ ಶಿಕ್ಷಣ ಇಲಾಖೆ ಅವರಿಗೆ ಅಧಿಕಾರವನ್ನು ನೀಡಲಾಗಿದೆ.

ಅದರಂತೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಯುಕ್ತಾಲಯದಿಂದ ಅನುಮತಿ ಪಡೆದ ನಂತರ ಆಡಳಿತ ಮಂಡಳಿಗಳ ಹಂತದಲ್ಲಿ ಖಾಲಿ ಹುದ್ದೆಗಳನ್ನು ಪಾರದರ್ಶಕವಾಗಿ ಮತ್ತು ಏಕರೂಪವಾಗಿ ನಡೆಸಲು ಕೆಲವೊಂದು ಮಾರ್ಗಸೂಚಿ / ಷರತ್ತುಗಳನ್ನು ವಿಧಿಸಲು ಸರ್ಕಾರವು ತೀರ್ಮಾನಿಸಿದ್ದು ಈ ಹಿನ್ನಲೆಯಲ್ಲಿ ಕೆಳಕಂಡಂತೆ ಆದೇಶಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಿನಾಂಕ 31/12/2015ರೊಳಗೆ ವಿವಿಧ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಿದ್ದು, ಅದರಂತೆ ಆಡಳಿತ ಮಂಡಳಿಗಳು ಅಧಿಸೂಚನೆ ಹೊರಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿ ಮೂಲಕ ಸಂದರ್ಶನ ನಡೆಸಿ ಭರ್ತಿ ಮಾಡಿಕೊಳ್ಳಲು ಷರತ್ತು/ ಮಾನದಂಡಗಳನ್ನು ನಿಗದಿಪಡಿಸಿ ಆದೇಶಿಸಿದೆ.
* ಖಾಲಿ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ಯುಜಿಸಿ ಅಧಿಸೂಚನೆ 18/7/2018ರಲ್ಲಿ ನಿಗದಿದಪಡಿಸಲಾಗಿರುವಂತೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಂಕಗಳನ್ನು ನಿಗದಿಪಡಿಸಿ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುವುದು.
* ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನದ ಕರೆಯನ್ನು ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮುಖಾಂತರ ರವಾನಿಸುವುದು. ಸಂದರ್ಶನಕ್ಕೆ 110 ಅಂಕಗಳನ್ನು ನಿಗದಿಪಡಿಸುವುದು ಎಂದು ಸುತ್ತೋಲೆ ಹೇಳಿದೆ.
ಧಾರವಾಡ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿರುವ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಕಾಲೇಜಿನಲ್ಲಿ 6 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು. ಸಿ.ಬಿ.ಎಸ್.ಇ ವಿಜ್ಞಾನ ವಿಭಾಗಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಕೆ ಮಾಡುವ ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಮೌಲಾನಾ ಆಝಾದ್ ಭವನ, ಸಾಧನಕೇರಿ ರಸ್ತೆ, ಸರ್ಕಾರಿ ಮುದ್ರಣಾಲಯ ಹತ್ತಿರ, ಧಾರವಾಡ ಇವರ ಕಾರ್ಯಾಲಯವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0836-2971590, 7337768683.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications