Amazon layoffs: ಮತ್ತೆ ನೂರಾರು ಉದ್ಯೋಗಿಗಳನ್ನು ಕಡಿತಗೊಳಿಸಿದ ಅಮೆಜಾನ್
ಕಳೆದ ಕೆಲವು ತಿಂಗಳುಗಳಲ್ಲಿ, ಅಮೆಜಾನ್ ತನ್ನ ವಿವಿಧ ಇಲಾಖೆಗಳಿಂದ ಜನರನ್ನು ತೆಗೆದು ಹಾಕಿಯೇ ಸುದ್ದಿ ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ, ಟೆಕ್ ದೈತ್ಯ ಈ ವರ್ಷ ಅನೇಕ ಹಿರಿಯ ಉದ್ಯೋಗಿಗಳ ಮೂಲ ವೇತನವನ್ನು ಹೆಚ್ಚಿಸುವುದಿಲ್ಲ ಎಂದು ಹೇಳಿತ್ತು. ಅಲ್ಲದೆ ಇ-ಕಾಮರ್ಸ್ ದೈತ್ಯ ಕಂಪನಿ ಅಮೆಜಾನ್ ಈ ವರ್ಷದ ಆರಂಭದಲ್ಲಿ ತನ್ನ ವಿವಿಧ ಇಲಾಖೆಗಳ ಉದ್ಯೋಗಿಗಳನ್ನು ತೆಗೆದು ಹಾಕಿತ್ತು. ಈಗ ಮತ್ತೊಮ್ಮೆ ಅಮೆಜಾನ್ ತನ್ನ ಉದ್ಯೋಗಿಗಳನ್ನು ಕಡಿತ ಮಾಡಲು ತೀರ್ಮಾನಿಸಿದೆ.
ಕಂಪನಿಯು ತನ್ನ ಕ್ಲೌಡ್ ಕಂಪ್ಯೂಟಿಂಗ್ ಆರ್ಮ್ ಅಮೆಜಾನ್ ವೆಬ್ ಸೇವೆಗಳಿಂದ (AWS) ನೂರಾರು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಅಮೆಜಾನ್ ತನ್ನ ಪುನರ್ರಚನಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದು, ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿದೆ. ಈ ಹಿಂಬಡ್ತಿಯಿಂದ ತೊಂದರೆಗೊಳಗಾದ ಎಲ್ಲಾ ಉದ್ಯೋಗಿಗಳಿಗೆ ಕಂಪನಿಯು ಪರಿಹಾರ ಪ್ಯಾಕೇಜ್ ಅನ್ನು ನೀಡುತ್ತದೆ.

ತೆಗೆದು ಹಾಕುತ್ತಿರುವುದು ಏಕೆ?
ವರದಿಗಳ ಪ್ರಕಾರ, ಎಡಬ್ಲ್ಯೂಎಸ್ ಮರುನಿರ್ಮಾಣಕ್ಕೆ ಒತ್ತು ನೀಡುತ್ತಿದ. ಇದರಿಂದ ಅಮೆಜಾನ್ ತಂತ್ರಜ್ಞಾನ, ಮಾರಾಟ ಮತ್ತು ಮಾರುಕಟ್ಟೆ ವಿಭಾಗಗಳಲ್ಲಿ ನೂರಾರು ಉದ್ಯೋಗಿಗಳನ್ನು ತೆಗೆದು ಹಾಕಲಾಗುತ್ತಿದೆ ಎಂದು ಕಾರಣ ನೀಡಿದೆ.
ಕಂಪನಿಯು ಸಾವಿರಾರು ಹುದ್ದೆಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದ್ದರಿಂದ ಆಂತರಿಕ ಅವಕಾಶಗಳನ್ನು ಹುಡುಕಲು ಪ್ರಯತ್ನಿಸುತ್ತಿದೆ ಎಂದು ಎಡಬ್ಲ್ಯೂಎಸ್ ಹೇಳಿದೆ.
ಕಳೆದ ವರ್ಷವೂ ಕಡಿತ
ಕಳೆದ ವರ್ಷ, ಅಮೆಜಾನ್ ವೆಚ್ಚವನ್ನು ಕಡಿತಗೊಳಿಸಲು ಜಾಗತಿಕವಾಗಿ 27,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿತ್ತು. ಈ ವರ್ಷವೂ ಕಂಪನಿಯು ಉದ್ಯೋಗಿಗಳನ್ನು ತೆಗೆದುಹಾಕುವ ಕಾರ್ಯವನ್ನು ಮುಂದುವರೆಸಿದೆ. ಕಂಪನಿಯು ಪ್ರೈಮ್ ವಿಡಿಯೋ ವಿಭಾಗ, MGM ಸ್ಟುಡಿಯೋಸ್ ಮತ್ತು ಬೈ ವಿತ್ ಪ್ರೈಮ್ ವಿಭಾಗದಿಂದ ಸುಮಾರು 1,000 ಉದ್ಯೋಗಿಗಳನ್ನು ತೆಗೆದುಹಾಕಿದೆ.
ಇದಲ್ಲದೆ, ಅಮೆಜಾನ್ ಒಡೆತನದ ಗೇಮಿಂಗ್ ಕಂಪನಿ ಟ್ವಿಚ್ ಕೂಡ 500 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ.

ಈ ಉದ್ಯೋಗ ಕಡಿತಗಳು ಅಮೇಜಾನ್ನಲ್ಲಿ ನಡೆಯುತ್ತಿರುವ ಪುನರ್ರಚನೆಯ ಪ್ರಯತ್ನಗಳಲ್ಲಿ ಒಂದು ಎಂದು ಗುರುತಿಸಲಾಗುತ್ತಿದೆ. 2022ರಲ್ಲಿ ಭಾರೀ ಪ್ರಮಾಣದಲ್ಲಿ ಉದ್ಯೋಗಿಗಳನ್ನು ತೆಗೆದುಹಾಕಲಾಗಿತ್ತು. ಇದರಿಂದ ಅಮೇಜಾನ್ ಕಂಪನಿಯ ಇತರ ಕಂಪನಿಗಳ ಮೇಲೂ ಪ್ರಭಾವ ಬೀರಿದೆ. ಕಳೆದ ತಿಂಗಳು ಕಂಪನಿ ನೂರಕ್ಕು ಹೆಚ್ಚು ಉದ್ಯೋಗಿಗಳನ್ನು ತೆಗೆದುಹಾಕಲಾಗಿತ್ತು. ಫಾರ್ಮಸಿ ಮತ್ತು ವೈದ್ಯಕೀಯ ವಿಭಾಗ, ನೀಲ್ ಲಿಂಡ್ಸೆ, ಅಮೆಜಾನ್ ಹೆಲ್ತ್ ಸರ್ವಿಸಸ್ ಉದ್ಯೋಗಿಗಳು ಸೇರಿದ್ದರು.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications