ಚಿತ್ರದುರ್ಗ: ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ, ಮೇ, 25: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಆಯ್ಕೆಯಾದವರಿಗೆ ತಿಂಗಳ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ
ಎಂ.ಎ, ಬಿ.ಇಡಿ, ಬಿ.ಎ, ಬಿ.ಇಡಿ, ಎಂ.ಎಸ್ಸಿ, ಬಿ.ಇಡಿ, ಬಿ.ಎಸ್ಸಿ, ಬಿಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಆಸಕ್ತರು ಜೂನ್ 2ರೊಳಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಆಂಜನೇಯ ದೇವಸ್ಥಾನ ಎದುರು, ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
661 ಕೋಟಿ ರೂ. ನಿವ್ವಳ ಲಾಭ: ಐಟಿ ಸೇವೆಗಳ ದೈತ್ಯ ಟೆಕ್ ಮಹೀಂದ್ರಾ 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ 40.9% ಕುಸಿತವನ್ನು ವರದಿ ಮಾಡಿದೆ. ಇನ್ನು ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯು 661 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಪಡೆದಿದೆ.
ಆದರೂ, ವ್ಯಾಪಕ ಉದ್ಯಮದ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು, ಪುಣೆ ಪ್ರಧಾನ ಕಚೇರಿ ಹೊಂದಿರುವ ಟೆಕ್ ಮೇಜರ್ ಪ್ರಸಕ್ತ ಹಣಕಾಸು ವರ್ಷದಲ್ಲಿ 6,000 ಫ್ರೆಶರ್ಗಳನ್ನು ನೇಮಕ ಮಾಡಲು ಕ್ಯಾಂಪಸ್ಗಳಿಗೆ ಹೋಗುವುದಾಗಿ ಘೋಷಣೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಹಿತಿ ಪ್ರಕಾರ "ನಾವು ಪ್ರತಿ ತ್ರೈಮಾಸಿಕದಲ್ಲಿ 1,500ಕ್ಕೂ ಹೆಚ್ಚು ಹೊಸ ಪದವೀಧರರನ್ನು ಸೆಳೆಯುವಲ್ಲಿ ಮುಂದುವರೆಯುತ್ತಿದ್ದೇವೆ" ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಮೋಹಿತ್ ಜೋಶಿ ಹೇಳಿದರು.
ಅಲ್ಲದೆ, ಇದು ವರ್ಷದಲ್ಲಿ 50,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೃತಕ ಬುದ್ಧಿಮತ್ತೆಯ ಬಗ್ಗೆ ತರಬೇತಿ ನೀಡಲಿದೆ ಎಂದು ಹೇಳಿದರು.
ಟೆಕ್ ಮಹೀಂದ್ರಾ ರಚನಾತ್ಮಕ ಬೆಳವಣಿಗೆ, ಕಾರ್ಯಾಚರಣೆ ಮತ್ತು ಸಾಂಸ್ಥಿಕ ಬದಲಾವಣೆಗಳನ್ನು ಒಳಗೊಂಡ ಮಹತ್ವಾಕಾಂಕ್ಷೆಯ ಮಾರ್ಗಸೂಚಿಯನ್ನು ರೂಪಿಸಿದೆ. ಇದು 2026-27ರ ಆರ್ಥಿಕ ವರ್ಷದ ವೇಳೆಗೆ ಕಂಪನಿಯು ತನ್ನ ಸಹವರ್ತಿಗಳ ಸರಾಸರಿ ಟಾಪ್ಲೈನ್ ಬೆಳವಣಿಗೆಯನ್ನು ಹೆಚ್ಚಿದಲು ಸಹಾಯ ಮಾಡುತ್ತದೆ.












Click it and Unblock the Notifications