ಚಿತ್ರದುರ್ಗದಲ್ಲಿ ನ್ಯಾಯಾಂಗ ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ, ಜುಲೈ, 26: ಚಿತ್ರದುರ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಪ್ರವರ್ಗ-1, 2ಎ, 3ಎ, 3ಬಿಗೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರಿಗೆ ನ್ಯಾಯಾಂಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ 2022-23ನೇ ಸಾಲಿನಲ್ಲಿ ಆಯ್ಕೆ ಮಾಡಲು ಖಾಲಿ ಇರುವ 10 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 12ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ:
ಆಸಕ್ತರು ಚಿತ್ರದುರ್ಗ ಜಿಲ್ಲಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಭವವದಲ್ಲಿ ಅಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಬಹುದು.
ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು: ಅಭ್ಯರ್ಥಿಯು ಹಿಂದುಳಿದ ವರ್ಗಗಳ ವರ್ಗ-1, 2ಎ, 3ಎ, 3ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಆಯ್ಕೆ ಮಾಡಲಾಗುವ ಒಟ್ಟಾರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಲ್ಲಿ, ಶೇಕಡಾ 33.33ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಸೀಟುಗಳನ್ನು ಮೀಸಲಿಡಲಾಗುವುದು. ಅಭ್ಯರ್ಥಿಯು ಎಲ್.ಎಲ್.ಬಿ. ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಮೊದಲು ಎರಡು ವರ್ಷದ ಅವಧಿಯೊಳಗೆ ಪಾಸು ಮಾಡಿರಬೇಕು. ಸರ್ಕಾರದ ಆದೇಶ ಸಂ:ಎಸ್ಡಬ್ಲ್ಯೂಡಿ 132 ಎಸ್ಪಿಡಿ 97 ದಿನಾಂಕ 8-2-2000ರಂತೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು.

ಉಲ್ಲೇಖ (3)ರ ಸರ್ಕಾರಿ ಆದೇಶದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ 2ಎ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ ಮಿತಿ 2,50,000 ರೂಪಾಯಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3,50,000ಗಳಿಗೆ ಆದಾಯದ ಮಿತಿ ನಿಗಧಿಪಡಿಸಲಾಗಿದೆ. ತರಬೇತಿ ಅವಧಿಯು 4 ವರ್ಷಗಳಾಗಿದ್ದು, ಅವಧಿಯಲ್ಲಿ ನಿಯಮಾನುಸಾರ ತರಬೇತಿ ಭತ್ಯೆ ಪಾವತಿಸಲಾಗುವುದು. ಜಿಲ್ಲಾ ಆಯ್ಕೆ ಸಮಿತಿಯ ಮೂಲಕ ಆಯ್ಕೆ ನಡೆಸಲಾಗುವುದು. ಅಭ್ಯರ್ಥಿಯ ಕನಿಷ್ಠ ವಯೋಮಿತಿಯು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 38 ವರ್ಷ ಮೀರಿರಬಾರದು. ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಾಯಿಸಿರಬೇಕು. ಇಲ್ಲದಿದ್ದರೆ ಆಯ್ಕೆಯಾದ ತಕ್ಷಣ ಶಿಷ್ಯವೇತನ ಪಾವತಿಸಲು ಆಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಇತರೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿದ್ದರೆ ಅಂತಹವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಅಲ್ಲದೆ ಶಿಷ್ಯವೇತನದ ಜೊತೆಗೆ ಶೇಕಡಾ 10ರಷ್ಟು ಬಡ್ಡಿಯನ್ನು ಭೂ ಕಂದಾಯ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು. ಮಧ್ಯದಲ್ಲಿ ತರಬೇತಿಯಿಂದ ಹಿಂದೆ ಸರಿದರೆ ಅವರು ಇಲಾಖೆಯಿಂದ ಪಡೆದ ಪೂರ್ಣ ಶಿಷ್ಯವೇತನವನ್ನು ಹಿಂದಿರುಗಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಪೂರ್ಣ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications