ಮೈಸೂರಿನಲ್ಲಿ ವಕೀಲರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ವಿವರ
ಮೈಸೂರು, ಸೆಪ್ಟೆಂಬರ್ 26: ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ 'ಕಾನೂನು ನೆರವು ರಕ್ಷಣಾ ಸಲಹೆ ವ್ಯವಸ್ಥೆ(LADCS, Legal Aid Defense Counsel System) ಕಛೇರಿಯಲ್ಲಿ ಖಾಲಿ ಇರುವ ವಕೀಲರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ ಅರ್ಹರು ಈ ಕೆಳಗಿನ ಮಾಹಿತಿಯನ್ನು ಅರಿತು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಉಪ ಕಾನೂನು ನೆರವು ರಕ್ಷಣಾ ಸಲಹೆಗಾರ(1) ಹುದ್ದೆಗೆ ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ, ಕ್ರಿಮಿನಲ್ ಕಾನೂನಿನ ಅತ್ಯುತ್ತಮ ತಿಳುವಳಿಕೆ, ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳು, ಕಾನೂನು ಸಂಶೋಧನೆಯಲ್ಲಿ ಕೌಶಲ್ಯ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ ಹೊಂದಿರಬೇಕು.

ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ, ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 20 ಕ್ರಿಮಿನಲ್ ವಿಚಾರಣೆಗಳನ್ನು ನಿರ್ವಹಿಸಿರಬೇಕು. ಐಟಿ ಜ್ಞಾನವನ್ನು ಹೊಂದಿರಬೇಕು ಮತ್ತು ಸಹಾಯಕ ಕಾನೂನು ನೆರವು ರಕ್ಷಣಾ ಸಲಹೆಗಾರ(4) ಹುದ್ದೆಗಳಿಗೆ ಕ್ರಿಮಿನಲ್ ಕಾನೂನಿನಲ್ಲಿ 3 ವರ್ಷಗಳ ಅಭ್ಯಾಸ, ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು.
ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ, ಅತ್ಯುತ್ತಮ ಬರವಣಿಗೆ ಮತ್ತು ಸಂಶೋಧನಾ ಕೌಶಲ್ಯಗಳು, ಕೆಲಸದಲ್ಲಿ ಐಟಿ ಜ್ಞಾನವನ್ನು ಹೊಂದಿರಬೇಕು.
ಅರ್ಹ ವಕೀಲರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ತಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಸಂಬoಧಪಟ್ಟ ದಾಖಲಾತಿಗಳೊಂದಿಗೆ ಅಕ್ಟೋಬರ್ 03 ರೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2330130 ಮತ್ತು [email protected] ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯಾದ ದಿನೇಶ್. ಬಿ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications