ಮೈಸೂರಿನಲ್ಲಿ ವಕೀಲರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ವಿವರ
ಮೈಸೂರು, ಸೆಪ್ಟೆಂಬರ್ 26: ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ 'ಕಾನೂನು ನೆರವು ರಕ್ಷಣಾ ಸಲಹೆ ವ್ಯವಸ್ಥೆ(LADCS, Legal Aid Defense Counsel System) ಕಛೇರಿಯಲ್ಲಿ ಖಾಲಿ ಇರುವ ವಕೀಲರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ ಅರ್ಹರು ಈ ಕೆಳಗಿನ ಮಾಹಿತಿಯನ್ನು ಅರಿತು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಉಪ ಕಾನೂನು ನೆರವು ರಕ್ಷಣಾ ಸಲಹೆಗಾರ(1) ಹುದ್ದೆಗೆ ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ, ಕ್ರಿಮಿನಲ್ ಕಾನೂನಿನ ಅತ್ಯುತ್ತಮ ತಿಳುವಳಿಕೆ, ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳು, ಕಾನೂನು ಸಂಶೋಧನೆಯಲ್ಲಿ ಕೌಶಲ್ಯ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ ಹೊಂದಿರಬೇಕು.

ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ, ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 20 ಕ್ರಿಮಿನಲ್ ವಿಚಾರಣೆಗಳನ್ನು ನಿರ್ವಹಿಸಿರಬೇಕು. ಐಟಿ ಜ್ಞಾನವನ್ನು ಹೊಂದಿರಬೇಕು ಮತ್ತು ಸಹಾಯಕ ಕಾನೂನು ನೆರವು ರಕ್ಷಣಾ ಸಲಹೆಗಾರ(4) ಹುದ್ದೆಗಳಿಗೆ ಕ್ರಿಮಿನಲ್ ಕಾನೂನಿನಲ್ಲಿ 3 ವರ್ಷಗಳ ಅಭ್ಯಾಸ, ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು.
ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ, ಅತ್ಯುತ್ತಮ ಬರವಣಿಗೆ ಮತ್ತು ಸಂಶೋಧನಾ ಕೌಶಲ್ಯಗಳು, ಕೆಲಸದಲ್ಲಿ ಐಟಿ ಜ್ಞಾನವನ್ನು ಹೊಂದಿರಬೇಕು.
ಅರ್ಹ ವಕೀಲರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ತಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಸಂಬoಧಪಟ್ಟ ದಾಖಲಾತಿಗಳೊಂದಿಗೆ ಅಕ್ಟೋಬರ್ 03 ರೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2330130 ಮತ್ತು [email protected] ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯಾದ ದಿನೇಶ್. ಬಿ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications