ದಾವಣಗೆರೆ: ಈ ದೇವಸ್ಥಾನದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ ಇಲ್ಲಿದೆ
ದಾವಣಗೆರೆ, ಫೆಬ್ರವರಿ, 27: ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಈ ದೇವಾಲಯದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಈ ಹುದ್ದೆಗೆ ಏನೆಲ್ಲ ಅರ್ಹತೆಗಳು ಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕಾಗುತ್ತದೆ. 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ ಅಂತಾ ಡಿವಿಜಿ ಸುದ್ದಿ ವರದಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗುತ್ತಲೇ ಇವೆ. ಕೆಲವು ಕ್ಷೇತ್ರಗಳಲ್ಲಿ ವಜಾ ಮಾಡಿದರೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಉದ್ಯೋಗವಕಾಶದ ಬಾಗಿಲು ತೆರೆಯುತ್ತಲೇ ಇವೆ. ಇದೀಗ ದೇವಸ್ಥಾನಗಳಲ್ಲೂ ಕೂಡ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಆಶ್ಚರ್ಯಕರ ಸಂಗತಿಯಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಆ ಹುದ್ದೆ ಯಾವುದು, ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿ ಓಡಿಸುವ ಹುದ್ದೆ ಖಾಲಿಯಿದ್ದು, ಪೂರಕ ಸೇವೆಗಳನ್ನು ಒದಗಿಸಲು ಏಜನ್ಸಿಗಳಿಗೆ ಟೆಂಡರ್ ಕರೆಯಲಾಗಿದೆ. ಇದರ ನೋಟಿಫಿಕೇಷನ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಈ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಪ್ರಾಣಿ, ಪಕ್ಷಿಗಳನ್ನು ಹೆದರಿಸುವ ಮತ್ತು ಪೂರಕ ಸೇವೆಗಳನ್ನು ಒದಗಿಸುವ ಕೆಲಸಕ್ಕೆ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications