STI/ RTI ಕ್ಲಿನಿಕ್ಗಳಿಗೆ ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ವಿವರ
ಮಡಿಕೇರಿ, ಅಕ್ಟೋಬರ್ 17: ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು ಹಾಗೂ ಇತರ ವಿವರಗಳು ಈ ಕೆಳಗಿನಂತಿದೆ.

ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ) ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ 21,000 ರೂಪಾಯಿ, ಗರಿಷ್ಠ ವಯೋಮಿತಿ: 60 ವರ್ಷ
ಅರ್ಹತೆ- ಸಮಾಜ ಕಾರ್ಯ/ ಮನೋವಿಜ್ಞಾನ/ ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿ/ ನರ್ಸಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದವರು ಅಥವಾ ಸಮಾಜ ಕಾರ್ಯ/ ಮನೋವಿಜ್ಞಾನ / ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್ ನಲ್ಲಿ 3 ವರ್ಷಗಳ ಅನುಭವದೊಂದಿಗೆ / ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು, ಸಮಾಜ ಕಾರ್ಯ / ಮನೋವಿಜ್ಞಾನ / ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್ ನಲ್ಲಿ 1 ವರ್ಷದ ಅನುಭವದೊಂದಿಗೆ / ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಆದ್ಯತೆ: ರಾಷ್ಟ್ರೀಯ ಏಡ್ಸ್ ಮತ್ತು ಎಸ್ಟಿಡಿ ನಿಯಂತ್ರಣ ಕಾರ್ಯಕ್ರಮ ಅಥವಾ ಸಮುದಾಯ ಸೆಟ್ಟಿಂಗ್ಗಳ ಅಡಿಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಜ್ಞಾನ ಮತ್ತು ಕೌಶಲ್ಯ
ಅಭ್ಯರ್ಥಿಯು ಎಂಎಸ್ ಆಫೀಸ್ ಇಂಟರ್ನೆಟ್ ಬಳಕೆ ಮತ್ತು ಎಲೆಕ್ಟ್ರಾನಿಕ್ ಮೇಲ್ ಕೆಲಸದ ಜ್ಞಾನದೊಂದಿಗೆ ಕಂಪ್ಯೂಟರ್ ಸಾಕ್ಷರರಾಗಿರಬೇಕು. ತಂಡಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಮತ್ತು ಕಾರ್ಯಕ್ರಮದ ಅಗತ್ಯಕ್ಕೆ ಅನುಗುಣವಾಗಿ ಕೆಲಸ ಮಾಡುವ, ಹೊಂದಿಕೊಳ್ಳುವ ಸಾಮರ್ಥ್ಯವಿರಬೇಕು. ಸರ್ಕಾರದ ಆರೋಗ್ಯ ನೀತಿ ನಿಯಮ ಹಾಗೂ ಸಂಬಂಧಪಟ್ಟ ಕಾರ್ಯಕ್ರಮದ ಬಗ್ಗೆ ಅರಿವು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ. ಇಲ್ಲಿ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-30.10.2024 ಸಂಜೆ 5.00 ಗಂಟೆಯೊಳಗೆ ಅರ್ಜಿ ಮತ್ತು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
ಅರ್ಜಿಯೊಂದಿಗೆ ವಿದ್ಯಾರ್ಹತೆಯ (ಸ್ನಾತಕೋತ್ತರ ಪದವಿ, ಪದವಿ, ಎಸ್.ಎಸ್.ಎಲ್.ಸಿ) ಅಂಕಪಟ್ಟಿ, ಪ್ರತಿ, ಕಂಪ್ಯೂಟರ್ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ದಿನಾಂಕ 30.10.2024 ಒಳಗೆ ಸಲ್ಲಿಸಬೇಕು. ನಿಗದಿತ ಸಮಯದ ನಂತರದ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಈ ನೇಮಕಾತಿಯು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ (ಎನ್ಎಸಿಒ) ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಎನ್ಎಸಿಪಿ-ವಿ ರ ಮಾರ್ಗಸೂಚಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-296708ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications