ಚಿತ್ರದುರ್ಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ ಎಷ್ಟು ಗೊತ್ತಾ?, ಇಲ್ಲಿದೆ ಮಾಹಿತಿ
ಚಿತ್ರದುರ್ಗ, ನವೆಂಬರ್, 29: ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನೂನು ಅಭಿರಕ್ಷಕ ಕಚೇರಿಯಲ್ಲಿ ಆಡಳಿತ ಸಹಾಯಕ/ಗುಮಾಸ್ತ, ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ ಮತ್ತು ಜವಾನ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಅವಧಿಗೆ (6 ತಿಂಗಳು) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಡಳಿತ ಸಹಾಯಕ/ಗುಮಾಸ್ತ 1 ಹುದ್ದೆ: ಆಡಳಿತ ಸಹಾಯಕ/ಗುಮಾಸ್ತ ಹುದ್ದೆಗೆ ಸರ್ಕಾರದಿಂದ ಮಾನ್ಯಗೊಂಡಂತಹ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿ ವಿದ್ಯಾರ್ಹತೆ ಹಾಗೂ ಮೂಲ ಪದ ಸಂಸ್ಕರಣಾ ಕೌಶಲ್ಯಗಳು ಮತ್ತು ಕಾರ್ಯನಿರ್ವಹಿಸುವ ಸಾಮರ್ಥ್ಯ ಡೇಟಾ ಫೀಡ್ ಮಾಡುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಕಂಪ್ಯೂಟರ್ ಮತ್ತು ಕೌಶಲ್ಯಗಳು ಅರ್ಜಿಯ ಸರಿಯಾದ ಸೆಟ್ಟಿಂಗ್ನೊಂದಿಗೆ ಉತ್ತಮ ಬೆರಳಚ್ಚು ವೇಗ, ಉಕ್ತಲೇಖನ ತೆಗೆದುಕೊಳ್ಳುವ ಮತ್ತು ನ್ಯಾಯಾಲಯದಲ್ಲಿ ಪ್ರಸ್ತುತಿಗಾಗಿ ಕಡತಗಳನ್ನು ಸಿದ್ಧಪಡಿಸುವ ಸಾಮಾರ್ಥ್ಯ ಕಡತಗಳ ನಿರ್ವಹಣೆ ಮತ್ತು ಸಂಸ್ಕರಣೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಹಾಗೂ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಾಸಿಕ 19,000 ರೂಪಾಯಿ ವೇತನ ನೀಡಲಾಗುವುದು.
ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ 1 ಹುದ್ದೆ: ವಿಶ್ವವಿದ್ಯಾನಿಲಯದಿಂದ ಪದವಿ ವಿದ್ಯಾರ್ಹತೆ ಹಾಗೂ ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳು, ಪದ ಮತ್ತು ಡೇಟಾ ಸಂಸ್ಕರಣಾ ಸಾಮರ್ಥ್ಯಗಳು, ಟೆಲಿ ಸಂವಹನ ವ್ಯವಸ್ಥೆಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಉತ್ತಮ ಟೈಪಿಂಗ್ ವೇಗದೊಂದಿಗೆ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಇವರಿಗೆ ಮಾಸಿಕ 17,271 ರೂಪಾಯಿ ವೇತನ ನೀಡಲಾಗುವುದು.
ಜವಾನ ಹುದ್ದೆ: ಜವಾನ ಹುದ್ದೆಗೆ ಎಸ್ಎಸ್ಎಲ್ಸಿ ಪಾಸಾಗಿರಬೇಕು. ಇವರಿಗೆ ಮಾಸಿಕ 15,202 ವೇತನ ನೀಡಲಾಗುವುದು. ಅರ್ಜಿ ಸಲ್ಲಿಕೆ ನವೆಂಬರ್ 29ರಿಂದ ಪ್ರಾರಂಭವಾಗಿದ್ದು, ಡಿಸೆಂಬರ್ 12 ಸಂಜೆ 5ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪಾಸ್ ಪೋರ್ಟ್ ಅಳತೆಯ 2 ಇತ್ತೀಚಿನ ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications