ನಿರುದ್ಯೋಗಿಗಳಿಗೆ ಸುವರ್ಣಾವಕಾಶ; ಚಿತ್ರದುರ್ಗದಲ್ಲಿ 75 ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ, ನವೆಂಬರ್ 24: ನಿರುದ್ಯೋಗಿಗಳಿಗೆ ಸುವರ್ಣಾವಕಾಶ ಸಿಕ್ಕಿದ್ದು, ಚಿತ್ರದುರ್ಗ ಜಿಲ್ಲೆಯ ವಿವಿಧ ಘಟಕಗಳಲ್ಲಿ 75 ಗೃಹರಕ್ಷಕ ಸಿಬ್ಬಂದಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಖಾಲಿ ಇರುವ ಗೃಹರಕ್ಷಕರ ಗೌರವ ಸದಸ್ಯ ಸ್ಥಾನಗಳಿಗೆ ಅರ್ಹರಿರುವ ಹಾಗೂ ಸ್ವಯಂ ಸೇವಕ ಗೃಹರಕ್ಷಕ ಸದಸ್ಯರಾಗಲು ಇಚ್ಛೆ ಇರುವ ಸೇವಾ ಮನೋಭಾವವುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಮುಂದಿನ ಡಿಸೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಭರ್ತಿ ಮಾಡಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಸಮಾದೇಷ್ಟರು, ಗೃಹರಕ್ಷಕ ದಳ ಕಚೇರಿ, ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಇಲ್ಲಿಗೆ ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದೆ. ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಚಿತ್ರದುರ್ಗ ಜಿಲ್ಲೆಯಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳ ವಿವರ
ಹೊಸದಾಗಿ ಪ್ರಾರಂಭವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಉಪ ಘಟಕದಲ್ಲಿ 32 ಖಾಲಿ ಸ್ಥಾನಗಳು, ಮೊಳಕಾಲ್ಮೂರು ತಾಲ್ಲೂಕು ರಾಂಪುರ ಉಪ ಘಟಕದಲ್ಲಿ 09 ಖಾಲಿ ಸ್ಥಾನಗಳು, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು, ಚಿತ್ರದುರ್ಗ ತಾಲ್ಲೂಕು ಭರಮಸಾಗರ ಉಪ ಘಟಕದಲ್ಲಿ 14 ಖಾಲಿ ಸ್ಥಾನಗಳು ಹಾಗೂ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು ಸೇರಿದಂತೆ ಒಟ್ಟು 75 ಖಾಲಿ ಸ್ಥಾನಗಳು ಇವೆ.
ಅರ್ಹತೆಗಳು
* ವಯಸ್ಸು: ಕನಿಷ್ಟ 19 ರಿಂದ 45 ವರ್ಷ ಒಳಗಿನವರಿರಬೇಕು.
* ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾಗಿರಬೇಕು.
* ಗೃಹರಕ್ಷಕ ಸದಸ್ಯತ್ವಕ್ಕೆ ಸೇರಬಯಸುವ ಅಭ್ಯರ್ಥಿಗಳು ನಿರ್ದಿಷ್ಟ ಪ್ರದೇಶದ ಗರಿಷ್ಟ 5 ಕಿ.ಮೀ ಒಳಗಿನವರಾಗಿರಬೇಕು.
* ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರಬಾರದು.
* ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಬಾರದು.
* ಉತ್ತಮ ದೇಹದಾರ್ಢ್ಯತೆಯನ್ನು ಹೊಂದಿರಬೇಕು.
* ಪುರುಷರು 168 ಸೆಂ.ಮೀ ಎತ್ತರ, 50 ಕೆ.ಜಿ ತೂಕ ಇರಬೇಕು.
* ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ.
* ಸ್ವಯಂ ಸೇವಾ ಮನೋಭಾವದಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

ಅರ್ಜಿ ವಿತರಣೆ ಸ್ಥಳ
ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಮೆದೇಹಳ್ಳಿ ರಸ್ತೆ, ಚಿತ್ರದುರ್ಗ ಇಲ್ಲಿ ಅರ್ಜಿಗಳು ದೊರೆಯಲಿದ್ದು, ನವೆಂಬರ್ 25ರಿಂದ ಡಿಸೆಂಬರ್ 6ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಡಿಸೆಂಬರ್ 10, ಸಂಜೆ 5.30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194-231403, ಬೋಧಕರು- 94810 47857, ಸಹಾಯಕ ಬೋಧಕರು 9481501233 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ತಿಳಿಸಿದ್ದಾರೆ.
Recommended Video
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications