ಚಿತ್ರದುರ್ಗ: ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ, ಆಯ್ಕೆಯಾದವರಿಗೆ ತಿಂಗಳ ಸಂಬಳ ಎಷ್ಟು?-ಮಾಹಿತಿ ಇಲ್ಲಿದೆ
ಚಿತ್ರದುರ್ಗ, ಫೆಬ್ರವರಿ, 08: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಎಷ್ಟು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
18 ವರ್ಷ ತುಂಬಿದ 45 ವರ್ಷ ಒಳಗಿನ ಅಭ್ಯರ್ಥಿಗಳು ದಿನಾಂಕ 20-02-2024ರ ಒಳಗಾಗಿ ಅರ್ಜಿಸಲ್ಲಿಸಬಹುದು. ಜಿಲ್ಲಾ ಯೋಜನಾ ಸಂಯೋಜಕ (ಡಿಸ್ಟಿಕ್ಟ್ ಮಿಷನ್ ಕೋಆಡಿನೇಟರ್) ಒಂದು ಹುದ್ದೆ ಖಾಲಿಯಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ವಿಜ್ಞಾನ ಅಥವಾ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಪಡೆದಿರಬೇಕು.

1. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ 3 ವರ್ಷದ ಯೋಜನೆ ನಿರ್ವಹಣೆ ಬಗ್ಗೆ ಅನುಭವ ಹೊಂದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ವೇತನ 50,000 ರೂಪಾಯಿ ನೀಡಲಾಗುವುದು.
2. ಲಿಂಗ ತಜ್ಞ (ಜೆಂಡರ್ ಸ್ಪೆಷಲಿಷ್ಟ್) ಒಂದು ಹುದ್ದೆ ಖಾಲಿಯಿದ್ದು, ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ಕಾರ್ಯ ಅಥವಾ ಇತರೆ ಸಾಮಾಜಿಕ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಲಿಂಗತ್ವ ಆಧಾರಿತ ವಿಷಯದ ಮೇಲೆ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 35,000 ರೂಪಾಯಿ ವೇತನ ನೀಡಲಾಗುವುದು.
3. ಹಣಕಾಸು ಸಾಕ್ಷರತೆ ಹಾಗೂ ಲೆಕ್ಕಿಗ ತಜ್ಞ (ಸ್ಪೆಷಲಿಷ್ಟ್ ಇನ್ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್) ಒಂದು ಹುದ್ದೆ ಖಾಲಿಯಿದ್ದು, ಅಂಗೀಗೃತ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಬ್ಯಾಂಕಿಂಗ್, ಇತರೆ ಸಂಖ್ಯಾ ಶಾಸ್ತ್ರ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಫೈನಾನ್ಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್ ವಿಭಾಗದಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 28,000 ರೂಪಾಯಿ ನೀಡಲಾಗುವುದು.
ಅರ್ಜಿ ಸಲ್ಲಿಸಬಯಸುವವರು ಹೆಚ್ಚಿನ ಮಾಹಿತಿಗಾಗಿ, ನಗರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರ ಕಚೇರಿಗೆ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ 08194-235259 ಹಾಗೂ ಇ ಮೇಲ್ [email protected] ಸಂಪರ್ಕಿಸಬಹುದಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications