ಜರ್ಮನಿಯಲ್ಲಿ ನರ್ಸಿಂಗ್ ಕೆಲಸ ಮಾಡುವವರಿಗೆ ಸುವರ್ಣಾವಕಾಶ; ಆಸಕ್ತರಿಂದ ಅರ್ಜಿ ಆಹ್ವಾನ
ಶಿವಮೊಗ್ಗ, ಜುಲೈ 17: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ ಟ್ಯಾಲೆಂಟ್ ಆರೆಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ ಅಥವಾ ಜಿಎನ್ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಮೇ ಟ್ಯಾಲೆಂಟ್ ಆರೆಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸೂಕ್ತ ವಿದ್ಯಾರ್ಹತೆ ಹೊಂದಿರುವ ನರ್ಸಿಂಗ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಿಲಿದೆ. ಈ ಸಂದರ್ಭದಲ್ಲಿ ಉಚಿತ ಊಟ, ವಸತಿ ಸೌಲಭ್ಯ ನೀಡುವುದರ ಜೊತೆ ಪ್ರಯಾಣ ವ್ಯವಸ್ಥೆಯನ್ನು ಒದಗಿಸುತ್ತಿದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಭಾರತೀಯ ನರ್ಸಿಂಗ್ ಲೈಸೆನ್ಸ್ ಹೊಂದಿದ್ದು, ಹೊಸಬರು/ ಅನುಭವವುಳ್ಳ 38 ವರ್ಷದೊಳಗಿನ ಮಹಿಳೆಯರು/ಪುರುಷರು ಅರ್ಜಿ ಸಲ್ಲಿಸಬಹುದಾಗಿದೆ. ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದೊಯ್ಯುವ ಅವಕಾಶವಿರುವುದಿಲ್ಲ.
ಆಸಕ್ತರು ಕಾರ್ಮಿಕ ಅಧಿಕಾರಿಗಳ ಕಚೇರಿ, ಉಪವಿಭಾಗ ಶಿವಮೊಗ್ಗ, 2ನೇ ಮಹಡಿ, ವಾಣಿಜ್ಯ ಸಂಕೀರ್ಣ, ಸೂಡಾ ಕಾಂಪ್ಲೇಕ್ಸ್, ಪೊಲೀಸ್ ಚೌಕಿ, ವಿನೋಬನಗರ, ಶಿವಮೊಗ್ಗ ಇಲ್ಲಿ ನೋಂದಾಯಿಸಿಕೊಳ್ಳುವಂತೆ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-248940 ನ್ನು ಸಂಪರ್ಕಿಸಬಹುದು.
-
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications