ಗದಗ; ಕೆಲಸ ಖಾಲಿ ಇದೆ, ಹುದ್ದೆಯ ವಿವರ, ಅರ್ಜಿ ಹಾಕಿ
ಗದಗ, ನವೆಂಬರ್ 28; ಗದಗದಲ್ಲಿ ಅನುದಾನಿತ ಸಹಾಯಕ ಪ್ರಾಧ್ಯಪಕ, ದೈಹಿಕ ಶಿಕ್ಷಣ ನಿರ್ದೇಶಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ.
ಕರ್ನಾಟಕ ವಿದ್ಯಾವರ್ಧಕ ಸಮಿತಿ, ಅಳವಂಡಿ. ಜಗದ್ಗುರು ಪಂಚಾಚಾರ್ಯ ಶಿಕ್ಷಣ ಮಹಾವಿದ್ಯಾಲಯ, ಗದಗ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಕರ್ನಾಟಕ ವಿದ್ಯಾವರ್ಧಕ ಸಮಿತಿ, ಅಳವಂಡಿ, ಇದರ ಅಡಿಯಲ್ಲಿ ಬರುವ ಜಗದ್ಗುರು ಪಂಚಾಚಾರ್ಯ ಶಿಕ್ಷಣ ಮಹಾವಿದ್ಯಾಲಯ, ಗದಗ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಸಹಾಯಕ ಪ್ರಾಧ್ಯಪಕರು 3, ದೈಹಿಕ ಶಿಕ್ಷಣ ನಿರ್ದೇಶಕರು 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತೀಯ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ.ಇಡಿ. ಪದವಿಯಲ್ಲಿ ಕನಿಷ್ಠ ಶೇ. 55 ಅಂಕ ಪಡೆದಿರಬೇಕು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.50) ಹಾಗೂ ಸಂಬಂಧಿಸಿದ ಶಾಲಾ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ ಶೇ.55 ರಷ್ಟು ಅಂಕಗಳನ್ನು ಪಡೆದಿರಬೇಕು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.50).
ಎನ್.ಇ.ಟಿ/ ಎಸ್.ಎಲ್.ಇ.ಟಿ/ ಎಸ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕೋರ್ಸ್ ವರ್ಕನೊಂದಿಗೆ ಪಿ.ಹೆಚ್.ಡಿ. ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಎನ್.ಇ.ಟಿ/ ಎಸ್.ಎಲ್.ಇ.ಟಿ/ ಎಸ್.ಇ.ಟಿ ಪರೀಕ್ಷೆಯಿಂದ ವಿನಾಯತಿ ಇರುತ್ತದೆ. ದಿನಾಂಕ 11/7/2009ರ ಪೂರ್ವದಲ್ಲಿ ಪಿ.ಹೆಚ್.ಡಿ. ಪದವಿ ಪಡೆದಿದ್ದಲ್ಲಿ / ಪಿ.ಹೆಚ್.ಡಿ. ಪದವಿಗೆ ನೋಂದಣಿ ಮಾಡಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳು ದಿನಾಂಕ 4/5/2016ರ ಯು.ಜಿ.ಸಿ ಅಧಿಸೂಚನೆಯಲ್ಲಿ ಹೊರಡಿಸಿರುವ ನಿಯಮಗಳನ್ನು ಪೂರೈಸಿರುವ ಷರತ್ತಿಗೊಳಪಟ್ಟಿರುತ್ತಾರೆ. ಇತಿಹಾಸ, ಜೀವಶಾಸ್ತ್ರ ಮತ್ತು ಇಂಗ್ಲೀಷ್ ಬೋಧನಾಶಾಸ್ತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆ; ಅಭ್ಯರ್ಥಿಗಳು ಭಾರತೀಯ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ.ಪಿ.ಇಡಿ. ಪದವಿಯಲ್ಲಿ ಕನಿಷ್ಠ ಶೇ. 55 ಅಂಕ ಪಡೆದಿರಬೇಕು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.50), ಎನ್.ಇ.ಟಿ/ ಎಸ್.ಎಲ್.ಇ.ಟಿ/ ಎಸ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕೋರ್ಸ್ ವರ್ಕನೊಂದಿಗೆ ಪಿ.ಹೆಚ್.ಡಿ. ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಎನ್.ಇ.ಟಿ/ ಎಸ್. ಎಲ್.ಇ.ಟಿ/ ಎಸ್.ಇ.ಟಿ ಪರೀಕ್ಷೆಯಿಂದ ವಿನಾಯತಿ ಇರುತ್ತದೆ.
ದಿನಾಂಕ 11/7/2009ರ ಪೂರ್ವದಲ್ಲಿ ಪಿ.ಹೆಚ್.ಡಿ. ಪದವಿ ಪಡೆದಿದ್ದಲ್ಲಿ ಪಿ.ಹೆಚ್.ಡಿ. ಪದವಿಗೆ ನೋಂದಣಿ ಮಾಡಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳು ದಿನಾಂಕ 4/5/2016ರ ಯು.ಜಿ.ಸಿ ಅಧಿಸೂಚನೆಯಲ್ಲಿ ಹೊರಡಿಸಿರುವ ನಿಯಮಗಳನ್ನು ಪೂರೈಸಿರುವ ಷರತ್ತಿಗೊಳಪಟ್ಟಿರುತ್ತಾರೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ ಮೀರಿರಬಾರದು. (20/6/2018ರ ಸರ್ಕಾರಿ ಆದೇಶ ಪ್ರಕಾರ ಪ.ಜಾ., ಪ.ಪಂ, ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ಗರಿಷ್ಠ 45, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 43 ಹಾಗೂ ಸಾಮಾನ್ಯ ವರ್ಗ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳು).
ದಿನಾಂಕ 13/12/2018ರ ಸರ್ಕಾರಿ ಆದೇಶದ ಸರ್ಕಾರದ ಸೇರ್ಪಡೆ ಆದೇಶದನ್ವಯ, ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಬೋಧನಾನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೇಲಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿರುವುದರೊಂದಿಗೆ ಅವರು ಬೋಧನಾನುಭವ ಹೊಂದಿರುವ ಸೇವಾವಧಿ ಅಥವಾ 5 ವರ್ಷಗಳು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಅವಧಿಯನ್ನು ಗರಿಷ್ಠ ವಯೋಮಿತಿಯಲ್ಲಿ ವಿನಾಯತಿಯನ್ನು ಪಡೆಯಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ, ಭತ್ಯೆಗಳು ಮತ್ತು ಇತರೆ ನಿಬಂಧನೆಗಳು ಯು.ಜಿ.ಸಿ. ಮತ್ತು ಕರ್ನಾಟಕ ಸರ್ಕಾರದ ನಿಯಮಗಳನ್ವಯ ಇರುತ್ತವೆ ಎಂದು ತಿಳಿಸಲಾಗಿದೆ. ಸದರಿ ಖಾಲಿ ಹುದ್ದೆಗಳ ಭರ್ತಿಗೆ ನೀಡಿರುವ ಅನುಮತಿಯನ್ನು ಹಾಗೂ ಆಯ್ಕೆ ಪ್ರಕ್ರಿಯೆಯನ್ನು ಯಾವುದೇ ಹಂತದಲ್ಲಾದರೂ ರದ್ದುಪಡಿಸುವ ಅಧಿಕಾರವನ್ನು ಇಲಾಖೆ ಅಥವಾ ಸರ್ಕಾರ ಹೊಂದಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಅಥವಾ ಸಂದರ್ಶನಕ್ಕೆ ಹಾಜರಾದ ಮಾತ್ರಕ್ಕೆ ಸದರಿ ಹುದ್ದೆಗಳ ಅಭ್ಯರ್ಥಿಗಳು ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು www.jpcedugdg.edu.in ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ಪ್ರಮಾಣಪತ್ರಗಳೊಂದಿಗೆ ತಮ್ಮ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಮಾಡಲು ವಿಳಾಸ. ಕಾರ್ಯದರ್ಶಿಗಳು, ಕರ್ನಾಟಕ ವಿದ್ಯಾವರ್ಧಕ ಸಮಿತಿಯ ಜಗದ್ಗುರು ಪಂಚಾಚಾರ್ಯ ಶಿಕ್ಷಣ ಮಹಾವಿದ್ಯಾಲಯ, ಹಾತಲಗೇರಿ ರೋಡ ಗದಗ - 582101, ತಾಲ್ಲೂಕ ಮತ್ತು ಜಿಲ್ಲೆ. ಗದಗ.
ಅರ್ಜಿಯೊಂದಿಗೆ ಪ.ಜಾ., ಪ.ಪಂ. ಮತ್ತು ಪ್ರವರ್ಗ-1 ಅಭ್ಯರ್ಥಿಗಳು ರೂ. 2000 ಮತ್ತು ಇತರೆ ಅಭ್ಯರ್ಥಿಗಳು ರೂ. 3000 ಗಳ ಶುಲ್ಕವನ್ನು ಪಾವತಿಸಬೇಕು. (ಶುಲ್ಕ ಹಿಂದಿರುಗಿಸಲಾಗುವುದಿಲ್ಲ). ಅರ್ಜಿ ಶುಲ್ಕದ ಬ್ಯಾಂಕ್ ಡಿಡಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಡಿ.ಡಿ.ಯನ್ನು SECRETARY, Karnataka Vidyavardhaka Samithi, Alwandi ಈ ಹೆಸರಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಡೆದು
ಕೊಂಡಿರಬೇಕು.
ಅರ್ಜಿ ಶುಲ್ಕದ ಡಿಡಿ ಇಲ್ಲದ, ಅಪೂರ್ಣ ಮಾಹಿತಿ ಇರುವ, ಪ್ರಮಾಣಪತ್ರ ಮತ್ತು ಅಂಕಪಟ್ಟಿಗಳು ಇಲ್ಲದ ಅರ್ಜಿಗಳನ್ನು ಮಾನ್ಯ ಮಾಡುವುದಿಲ್ಲ. ಲಕೋಟೆ ಈ ಮೇಲ್ಬಾಗದಲ್ಲಿ ಸಹಾಯಕ ಪ್ರಾಧ್ಯಾಪಕರ/ ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಎಂದು ನಮೂದಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08372-400672.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications