Canara Bank: ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ, 15 ಸಾವಿರ ರೂ. ಶಿಷ್ಯ ವೇತನ
ಬೆಂಗಳೂರು, ಸೆಪ್ಟೆಂಬರ್ 21: ಕೆನರಾ ಬ್ಯಾಂಕ್ ಗ್ರಾಜ್ಯುಯೇಟ್ ಅಪ್ರೆಂಟಿಶಿಪ್ ಅಡಿ ನೇಮಕಾತಿಗೆ ಶನಿವಾರದಿಂದ ನೋಂದಣಿಯನ್ನು ಆರಂಭಿಸಿದೆ. 3 ಸಾವಿರ ಅಪ್ರೆಂಟಿಸ್ಗಳ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ತರಬೇತಿ ಅವಧಿ ಒಂದು ವರ್ಷಗಳು. ಕೆನರಾ ಬ್ಯಾಂಕ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ಆಸಕ್ತ ಮತ್ತು ಅರ್ಹರು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 4, 2024 ಕೊನೆಯ ದಿನವಾಗಿದೆ.
ಅಪ್ರೆಂಟಿಶಿಪ್ ನೇಮಕಾತಿ ನಿಯಮಗಳು, 1961ರ ಅಡಿ 2024-25ನೇ ಆರ್ಥಿಕ ವರ್ಷಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹರು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 4ರ ತನಕ www.canarabank.com ವೆಬ್ ಸೈಟ್ನಲ್ಲಿ ಕೆರಿಯರ್ ವಿಭಾಗದ ಮೇಲೆ ಕ್ಲಿಕ್ ಮಾಡಿ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಆನ್ಲೈನ್ ಹೊರತಾಗಿ ಬೇರೆ ಯಾವುದೇ ಮಾರ್ಗದ ಮೂಲಕ ಸಲ್ಲಿಕೆ ಮಾಡುವ ಅರ್ಜಿಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಒಮ್ಮೆ ಬಳಸಿಕೊಂಡ ಎನ್ರೋಲ್ಮೆಂಟ್ ಐಡಿಯನ್ನು ಸೀಟು ಹಂಚಿಕೆ ತನಕ ಬಳಕೆ ಮಾಡಬೇಕು. ಆದ್ದರಿಂದ ಸೇವ್ ಮಾಡಿ ಇಟ್ಟುಕೊಳ್ಳಿ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಅರ್ಜಿ ಶುಲ್ಕ, ಶಿಷ್ಯ ವೇತನ ವಿವರ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಎಲ್ಲಾ ವರ್ಗದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ. ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಮೂಲಕ ಪಾವತಿ ಮಾಡಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ಶಿಷ್ಯ ವೇತನ ನೀಡಲಾಗುತ್ತದೆ. ಸರ್ಕಾರದ ಸಹಾಯಧನವೂ ಸೇರಿ. ಕೆನರಾ ಬ್ಯಾಂಕ್ 10,500 ರೂ. ನೀಡಿದರೆ, ಸರ್ಕಾರ ನೇರವಾಗಿ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 4,500 ರೂ.ಗಳನ್ನು ಖಾತೆಗೆ ಜಮಾ ಮಾಡುತ್ತದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನ್ಮ ದಿನಾಂಕ ದೃಢೀಕರಣಕ್ಕೆ (ಜನನ ಪ್ರಮಾಣ ಪತ್ರ, ಜನ್ಮ ದಿನಾಂಕ ಹೊಂದಿರುವ ಎಸ್ಎಸ್ಎಲ್ಸಿ/ 10ನೇ ತರಗತಿ ಪ್ರಮಾಣ ಪತ್ರ), ಅಂಕಪಟ್ಟಿಗಳು, ಆದಾಯ ಮತ್ತು ಆಸ್ತಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರದ ಅಗತ್ಯವಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ( ಅಭ್ಯರ್ಥಿಗಳು ಸೆಪ್ಟೆಂಬರ್ 1, 1996 ರಿಂದ ಸೆಪ್ಟೆಂಬರ್ 1, 2004ರೊಳಗೆ ಜನಿಸಿರಬೇಕು). ಈ ಅಧಿಸೂಚನೆ ಅನ್ವಯ ಅರ್ಜಿ ಸಲ್ಲಿಸಿ ಆಯ್ಕೆಗೊಂಡ ಅಭ್ಯರ್ಥಿಗಳ ತರಬೇತಿ ಅವಧಿ ಒಂದು ವರ್ಷಗಳು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications