ಧಾರವಾಡ; ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ, ಫೆಬ್ರವರಿ 21; ಧಾರವಾಡದ ತಾಲೂಕುಗಳಲ್ಲಿರುವ ನಾಡಕಚೇರಿಗಳಿಗೆ ಡಾಟಾ ಎಂಟ್ರಿ ಕಂಪ್ಯೂಟರ್ ಆಪರೇಟರ್ಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 9 ಕೊನೆಯ ದಿನವಾಗಿದೆ.
ಮಾನವ ಸಂಪನ್ಮೂಲ ಏಜೆನ್ಸಿಯಿಂದ ಹೊರಗುತ್ತಿಗೆ ಆಧಾರದ ಮೇಲೆ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ, ಅಣ್ಣಿಗೇರಿ, ಅಳ್ನಾವರ ಮತ್ತು ಹುಬ್ಬಳ್ಳಿ ನಗರ ತಾಲೂಕುಗಳಲ್ಲಿರುವ ನಾಡಕಚೇರಿಗಳಿಗೆ ಡಾಟಾ ಎಂಟ್ರಿ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಚಿಕ್ಕಬಳ್ಳಾಪುರ; ಕೆಲಸ ಖಾಲಿ ಇದೆ, ಫೆ. 28ರೊಳಗೆ ಅರ್ಜಿ ಹಾಕಿ
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2233840 ಸಂಪರ್ಕಿಸಬಹುದು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಫೆಬ್ರವರಿ 24ರಂದು ಉದ್ಯೋಗ ಮೇಳ
ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ; ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 21 ಕೊನೆಯ ದಿನವಾಗಿದೆ.
ತುಮಕೂರು ಕೋರ್ಟ್ನಲ್ಲಿ ಕೆಲಸ ಖಾಲಿ ಇದೆ
ಶೀಘ್ರಲಿಪಿಗಾರರು (16), ಬೆರಳಚ್ಚು-ನಕಲುಗಾರರು(4), ಆದೇಶ ಜಾರಿಕಾರರು(17) ಮತ್ತು ಬೆರಳಚ್ಚುಗಾರರು (10) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಮಚಂದ್ರ ಡಿ.ಹುದ್ದಾರ ತಿಳಿಸಿದ್ದಾರೆ.