ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು, ಮಾರ್ಚ್ 30; ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ವತಿಯಿಂದ 2020-21 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಾಗಿ ತಾತ್ಕಲಿಕವಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಚಿತ್ರಕಲೆ, ಅಚ್ಚುಕಲೆ, ಶಿಲ್ಪಕಲೆ, ಅನ್ವಯಕಲೆ, ಹಾಗೂ ಛಾಯಚಿತ್ರ ಮತ್ತು ಪತ್ರಿಕೋದ್ಯಮ ವಿಭಾಗ, ಕಲಾ ಇತಿಹಾಸ ವಿಭಾಗಗಳಿವೆ. ಬಿ. ವಿ. ಎ ಕೋರ್ಸ್ ಎರಡನೇ ಸೆಮಿಸ್ಟರ್ನಲ್ಲಿ ಭಾರತದ ಸಂವಿಧಾನ ಪತ್ರಿಕೆಯು ಕಡ್ಡಾಯವಾಗಿದೆ.
ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ; 402 ಹುದ್ದೆ
ಈ ಹಿನ್ನೆಲೆಯಲ್ಲಿ ಏಪ್ರಿಲ್ 19ರಿಂದ ಒಂದು ವಾರಕ್ಕೆ ಮೂರು ಗಂಟೆಗಳ ಪಾಠ ಪ್ರವಚನಗಳನ್ನು ಪೂರೈಸಲು ಎಲ್. ಎಲ್. ಬಿ ಮತ್ತು ಎಲ್. ಎಲ್. ಎಂ ಪದವಿಯೊಂದಿಗೆ ಬೋಧನಾನುಭವ ಹೊಂದಿರುವ ಉಪನ್ಯಾಸಕರು ಅರ್ಜಿ ಸಲ್ಲಿಸಬಹುದು.
ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಏಪ್ರಿಲ್ 10ರೊಳಗೆ ಅರ್ಜಿ ಹಾಕಿ
ಆಸಕ್ತರು ಏಪ್ರಿಲ್ 9ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ದೂರವಾಣಿ ಸಂಖ್ಯೆ 0821-2438931 ಅನ್ನು ಸಂಪರ್ಕಿಸಬಹುದು.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ
Recommended Video
ವಾಕ್ ಇನ್ ಸಂದರ್ಶನ; ಕೊಪ್ಪಳದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಏಪ್ರಿಲ್ 3ರಂದು ವಾಕ್-ಇನ್-ಇಂಟರ್ವ್ಯೂವ್ ಆಯೋಜನೆ ಮಾಡಲಾಗಿದೆ. ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.