ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಜೂನ್ 15ರೊಳಗೆ ಅರ್ಜಿ ಹಾಕಿ
ಬಳ್ಳಾರಿ, ಜೂನ್ 07; ಬಳ್ಳಾರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣದ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 15ರೊಳಗೆ ಅರ್ಜಿ ಸಲ್ಲಿಸಬೇಕು.
ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ. ಹೆಚ್. ಸತೀಶ್ ಮಾಹಿತಿ ನೀಡಿದ್ದಾರೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಜೂನ್ 15ರೊಳಗಾಗಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಯಾವ-ಯಾವ ವಿಷಯಗಳು: ಕನ್ನಡ ವಿಷಯ 8, ಇಂಗ್ಲೀಷ್ ವಿಷಯ 7, ಹಿಂದಿ 5, ಗಣಿತ 9, ವಿಜ್ಞಾನ 7, ಸಮಾಜ ವಿಜ್ಞಾನ 2, ದೈಹಿಕ ಶಿಕ್ಷಕರು 7, ಗಣಕಯಂತ್ರ ಶಿಕ್ಷಕರು 7 ಸೇರಿ ಒಟ್ಟು 52 ಅತಿಥಿ ಶಿಕ್ಷಕರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಬಿಎ, ಬಿಇಡಿ, ಬಿಎಸ್ಸಿ, ಟಿಇಟಿ, ಬಿಪಿಇಡಿ, ಬಿಎಸ್ಸಿ ಕಂಪ್ಯೂಟರ್, ಬಿಸಿಎ ಅರ್ಹತೆ ಹೊಂದಿರಬೇಕು. ಆಸಕ್ತ ಮತ್ತು ಅರ್ಹ ಶಿಕ್ಷಕರು ಅರ್ಜಿಗಳನ್ನು ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7760167576, 9844969858, 8310558003, 9886297280ಗೆ ಸಂಪರ್ಕಿಸಬಹುದು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶ ಮಾಹಿತಿ: ಕರ್ನಾಟಕ ರಾಜ್ಯದಲ್ಲಿ 270 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಆಗಸ್ಟ್ 2024ರ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲಾಗಿದೆ.
ಬೆಂಗಳೂರು ವಿಭಾಗೀಯ ವ್ಯಾಪ್ತಿಗೆ ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಜಿಲ್ಲೆಗಳನ್ನು ಒಳಗೊಂಡಿದ್ದು ಈ ವಿಭಾಗೀಯ ವ್ಯಾಪ್ತಿಯಲ್ಲಿ 69 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿದ್ದು ಇದರಲ್ಲಿ 7 ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಶೇ.100 ಮಹಿಳೆಯರಿಗೆ ಮೀಸಲಾತಿ ಇರುತ್ತದೆ. ಉಳಿದ 62 ತರಬೇತಿ ಸಂಸ್ಥೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಅನ್ವಯ ಪ್ರವೇಶಾವಕಾಶವಿರುತ್ತದೆ.
ಐಟಿಐಗಳಲ್ಲಿ 2024ನೇ ಶೈಕ್ಷಣಿಕ ಸಾಲಿನ ಆನ್ಲೈನ್ ಪ್ರವೇಶದ ಮೂಲಕ ಸರ್ಕಾರದ ನಿಯಮಾನುಸಾರ ಮೇರಿಟ್ ಮತ್ತು ಮೀಸಲಾತಿಯನ್ವಯ ಪಾರದರ್ಶಕವಾಗಿ ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಡಿಜಿಟಿ ನವದೆಹಲಿ ನಿಯಮಾನುಸಾರ ಈ ಸಂಸ್ಥೆಗಳಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಹೊಂದಿರುವ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ 1-2 ವರ್ಷದ ವೃತ್ತಿಗೆ ಪ್ರವೇಶಕ್ಕೆ ಅವಕಾಶವಿರುತ್ತದೆ.
ಸರ್ಕಾರಿ ಸಂಸ್ಥೆಗಳಲ್ಲಿ ವಾರ್ಷಿಕ ರೂ.1200ಗಳು ಮಾತ್ರ ಬೋಧನ ಶುಲ್ಕವಿರುತ್ತದೆ. ಸರ್ಕಾರದ ನಿಯಾಮಾನುಸಾರ ಈ ಸಂಸ್ಥೆಗಳಲ್ಲಿ ಪ್ರವೇಶ ಹೊಂದುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ತರಬೇತಿ ಅನುಕೂಲವಾಗುವ ಉಚಿತ ಪರಿಕರಗಳನ್ನು ವಿತರಿಸಲಾಗುವುದು.
ವೆಲ್ಡರ್, ಕಾರ್ಪೆಂಟರ್, ಸೀಟ್ ಮೆಟಲ್ ವರ್ಕ್ರ್, ಸರ್ಫಸ್ ಒರನಾಮೆಷನ್ ಟೆಕ್ನಿಕ್, ವೈರ್ ಮ್ಯಾನ್, ಡ್ರೇಸ್ ಮೇಕಿಂಗ್, ಸ್ವೀಂಗ್ ಟೆಕ್ನಲಾಜಿ, ಮಾಸನ್, ಪ್ಲಂಬರ್ ಇತ್ಯಾದಿ ವೃತ್ತಿಗಳಿಗೆ 8ನೇ ತರಗತಿ ಉತ್ತೀರ್ಣರಾಗಿರಬೇಕು ಅಥವಾ 10ನೇ ತರಗತಿ ಅನುತ್ತೀರ್ಣ ಅಂಕಪಟ್ಟಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಐಟಿಐ ಗಳಲ್ಲಿ ತರಬೇತಿ ಹೊಂದಲು ಅವಕಾಶವಿರುತ್ತದೆ. ಉಳಿದಂತಹ ಇತರೆ ವಿವಿಧ ವೃತ್ತಿಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಬೆಂಗಳೂರು ವಿಭಾಗೀಯ ವ್ಯಾಪ್ತಿಯಲ್ಲಿ ಹಲವಾರು ಸರ್ಕಾರಿ ಐಟಿಐ ಗಳು ಕೈಗಾರಿಕೆ 4.0ಗೆ ತಕ್ಕಂತೆ ಅಧುನಿಕ ಸೌಲಭ್ಯಗಳನ್ನು ಒಳಗೊಂಡ ವಿವಿಧ ವೃತ್ತಿಗಳನು ಉದ್ಯೋಗ ಕಾರ್ಯಕ್ರಮದಡಿಯಲ್ಲಿ ಪ್ರಾರಂಭಿಸಿದ್ದು ಆಯಾ ಜಿಲ್ಲೆ ತಾಲೂಕುಗಳಲ್ಲಿರುವ ವಿವಿಧ ಉದ್ದಿಮೆ ಮತ್ತು ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶಗಳನ್ನು ಹೊಂದಲು ಸಹಕಾರಿಯಾಗಲಿದೆ.
ಬೆಂಗಳೂರು ವಿಭಾಗೀಯ ವ್ಯಾಪ್ತಿಯ ಹಲವಾರು ಐಟಿಐಗಳಲ್ಲಿ ಉಭಯ ತರಬೇತಿ ವ್ಯವಸ್ಥೆ (ಡಿಎಸ್ಟಿ) ಅಡಿಯಲ್ಲಿ ವಿವಿಧ ಕೈಗಾರಿಕೆಗಳ ಸಹಭಾಗಿತ್ವದಲ್ಲಿ ವೃತ್ತಿ ತರಬೇತಿಗಳನ್ನು ಪ್ರಾರಂಭಿಸಿದ್ದು ಅಪ್ರೆಂಟಿಶಿಪ್ ಮತ್ತು ಉದ್ಯೋಗಾವಕಾಶಗಳನ್ನು ಹೊಂದುವಲ್ಲಿ ನೆರವಾಗಲಿದೆ. ರಾಜ್ಯದ ಯುವ ಜನತೆಯೂ ಐಟಿಐಗಳಲ್ಲಿ ಪ್ರವೇಶ ಹೊಂದುವ ಮೂಲಕ ಉದ್ಯೋಗಸ್ಥರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಇಲಾಖೆಯೂ ಸಹಕಾರಿಯಾಗಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications