ಬಳ್ಳಾರಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ
ಬಳ್ಳಾರಿ, ಫೆಬ್ರವರಿ 12: ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ.
ಬಳ್ಳಾರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ಸಿರುಗುಪ್ಪ, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಒಟ್ಟು 6 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ECIL ನೇಮಕಾತಿ 2021: 650 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ನೇಮಕಾತಿಯನ್ನು ಗೌರವ ಸಂಭಾವನೆ ಆಧಾರದ ಮೇರೆಗೆ ಮಾಡಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಎಸ್ಎಸ್ಎಲ್ಸಿ ಉತ್ತೀರ್ಣಗೊಂಡಿರಬೇಕು, ಸ್ಥಳೀಯ ಗ್ರಾಮ ಪಂಚಾಯಿತಿಗೆ ಸೇರಿರಬೇಕು.
ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ
ಮೀಸಲಾತಿ; ಹಗರಿಬೊಮ್ಮನಹಳ್ಳಿಯ ಬಾಚಿಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಅಂಗವಿಕಲ/ ವಿಕಲಚೇತನ ಹೊಂದಿರುವ ಸಾಮಾನ್ಯ ಅಭ್ಯರ್ಥಿ. ಕೂಡ್ಲಿಗಿ ಬಡೇಲಡಕು ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಪ್ರ. ವರ್ಗ-1 (ಇತರೆ), ಸಿರುಗುಪ್ಪದ ಹಳೇಕೋಟೆ ಗ್ರಾಪಂ ವ್ಯಾಪ್ತಿಯ ಗ್ರಂಥಾಲಕ್ಕೆ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) ಮೀಸಲಾತಿ ನಿಗದಿ ಮಾಡಲಾಗಿದೆ.
ಹಾವೇರಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ
ಕೂಡ್ಲಿಗಿ ಹಾರಕಭಾವಿ ಗ್ರಂಥಾಲಯಕ್ಕೆ ಪರಿಶಿಷ್ಟ ಜಾತಿಯ (ಗ್ರಾಮೀಣ) ಅಭ್ಯರ್ಥಿ. ಹುರುಳಿಹಾಳ್ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಸಾಮಾನ್ಯ ಅಭ್ಯರ್ಥಿ (ಇತರೆ) ಹಾಗೂ ಬಳ್ಳಾರಿಯ ಯರಗುಡಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ 3ಬಿ (ಇತರೆ) ಅಭ್ಯರ್ಥಿ ಮೀಸಲಾಗಿ ನಿಗದಿಯಾಗಿದೆ.
ನಿಗದಿ ಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕೆ ಕಲಿಕಾ ಕೇಂದ್ರಗಳ ಪ್ರೇರಕ/ ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದಾಗಿದೆ.
ಆದರೆ, ಅವರು ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ/ ಉಪಪ್ರೇರಕ ಹುದ್ದೆಗೆ ರಾಜೀನಾಮೆ ನೀಡಬೇಕು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಆಯಾ ಕಚೇರಿಗೆ ಸಲ್ಲಿಸಬೇಕು. ಪ್ರೇರಕ/ ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು 18 ವರ್ಷವನ್ನು ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿ 33 ವರ್ಷ, 2ಎ/ 2ಬಿ/ 3ಎ/ 3ಬಿ 36, ಪ.ಜಾತಿ/ ಪ. ಪಂಗಡ/ ಪ್ರ.ವರ್ಗ-1 ರ ಅಭ್ಯರ್ಥಿಗೆ 38 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಎಸ್ಎಸ್ಎಲ್ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಆಯಾ ತಾಲೂಕಿನ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ/ ಪಂಚಾಯತಿ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಯನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 08392-276887.