ಬಳ್ಳಾರಿ; ಗ್ರಂಥಾಲಯ ಮೇಲ್ವಿಚಾರಕ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ, ಡಿಸೆಂಬರ್ 11; ಬಳ್ಳಾರಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 14ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕುರಗೋಡು ಪುರಸಭೆ ಯಲ್ಲಾಪುರದ 19ನೇ ವಾರ್ಡ್ನಲ್ಲಿ ನಿರ್ಮಿಸಿದ ಗ್ರಂಥಾಲಯ ನಿರ್ವಹಣೆಗೆ ಗೌರವಧನ ಆಧಾರದ ಮೇಲೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಕುರಗೋಡು ಪುರಸಭೆಯ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಗ್ರಂಥಾಲಯ ನಿರ್ವಹಣೆಯಲ್ಲಿ ಅನುಭವ ಹೊಂದಿದ, ಪದವಿ ಪೂರ್ಣಗೊಳಿಸಿರುವ ಸ್ಥಳೀಯ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗುದೆ.

ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 14. ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಫೋರ್ಟ್ ಅಳತೆಯ 2 ಭಾವಚಿತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಇತರೆ ದಾಖಲೆ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08392-263166.
ಡಿಸೆಂಬರ್ 12ರಂದು ಸಂದರ್ಶನ; ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 12ರಂದು ಅಪ್ರೆಂಟಿಸ್ ನೇಮಕಾತಿಗಾಗಿ ಸಂದರ್ಶನ ಆಯೋಜನೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ 9ಕ್ಕೆ ಕ್ಯಾಂಪಸ್ ಸಂದರ್ಶನ ಆರಂಭವಾಗಲಿದೆ. ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಸಂದರ್ಶನ ನಡೆಯಲಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಗವಿಶಂಕರ್ ತಿಳಿಸಿದ್ದಾರೆ.
ಕ್ಯಾಂಪಸ್ ಸಂದರ್ಶನದಲ್ಲಿ ಟೋಯೋಟಾ, ಜಿ-ಟೆಕ್ನೋ, ಜಿಂದಾಲ್, ಶಾತವಾಹನ ಇಸ್ಪಾತ್ ಲಿ, ಹ್ಯಾಲಿಸ್ ಬ್ಲೂ ಹಾಗೂ ಇನ್ನಿತರ ಕಂಪನಿಗಳು ಪಾಲ್ಗೊಳ್ಳಲಿವೆ. ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ. ಎಂ, ಎಂ. ಎಂ. ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವಯೋಮಿತಿ 18 ರಿಂದ 26 ವರ್ಷಗಳು.
ಕ್ಯಾಂಪಸ್ ಸಂದರ್ಶನಕ್ಕೆ ಬರುವಾಗ ಎಸ್. ಎಸ್. ಎಲ್. ಸಿ ಅಂಕಪಟ್ಟಿ ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರ, ಆಧಾರ್ ಕಾರ್ಡನ ಪ್ರತಿ ಹಾಗೂ ಬಯೋಡೇಟಾ ತರಬೇಕು.
ಐಟಿಐ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರೂ ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9741183501 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications