ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ; ಮಾ.26 ಕೊನೆ ದಿನ
ಬೆಂಗಳೂರು, ಮಾರ್ಚ್ 16; ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ತಾಲೂಕು ಮಟ್ಟದಲ್ಲಿ ತಾಲೂಕು ಸಂಯೋಜಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಕರೆದಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 26/3/2021 ಕೊನೆಯ ದಿನವಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ತಾಲೂಕು ಮಟ್ಟದಲ್ಲಿ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವಿವಿಧ ಹುದ್ದೆಗೆ ಅರ್ಜಿ ಕರೆದ ತುಮಕೂರು ಜಿಲ್ಲಾ ಪಂಚಾಯಿತಿ
ತಾಂತ್ರಿಕ ಸಂಯೋಜಕರು 3 ಹುದ್ದೆ. ಅರ್ಜಿ ಸಲ್ಲಿಸುವವರು ಸಿವಿಲ್ನಲ್ಲಿ ಬಿಇ/ ಎಂ. ಟೆಕ್ ವ್ಯಾಸಂಗ ಮಾಡಿರಬೇಕು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 29,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500)
ಕೋಲಾರ ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ತಾಲೂಕು ಐ. ಇ. ಸಿ. ಸಂಯೋಜಕರು 4 ಹುದ್ದೆ. ಅಭ್ಯರ್ಥಿಗಳು MSW/ ಮಾಸ್ ಕಮ್ಯುನಿಕೇಷನ್ನಲ್ಲಿ ಯುಜಿ/ ಪಿಜಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 20,000 (ಪ್ರಯಾಣ ಭತ್ಯೆ 2000 ರೂ.).
ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ; 402 ಹುದ್ದೆ
ತಾಂತ್ರಿಕ ಸಹಾಯಕರು (ಕೃಷಿ) 1 ಹುದ್ದೆ. ಅಭ್ಯರ್ಥಿಗಳು ಕೃಷಿ ವಿಷಯದಲ್ಲಿ ಬಿಎಸ್ಸಿ/ ಎಂಎಸ್ಸಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).
ತಾಂತ್ರಿಕ ಸಹಾಯಕರು (ತೋಟಗಾರಿಕೆ) 1 ಹುದ್ದೆ. ಅಭ್ಯರ್ಥಿಗಳು ತೋಟಗಾರಿಕೆ ವಿಷಯದಲ್ಲಿ ಬಿಎಸ್ಸಿ/ ಎಂಎಸ್ಸಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).
ಆಸಕ್ತರು ವೆಬ್ ಸೈಟ್ನಲ್ಲಿ ಅರ್ಜಿಗಳನ್ನು ಪಡೆದು ಖುದ್ದಾಗಿ, ಅಂಚೆ ಮೂಲಕ ಸಲ್ಲಿಕೆ ಮಾಡಬೇಕು.
Recommended Video
ಅರ್ಜಿ ಸಲ್ಲಿಕೆಗೆ ವಿಳಾಸ; ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಬೀರಸಂದ್ರ (ಚಪ್ಪರದ ಕಲ್ಲು), ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು 562110.