ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ; ಮಾ.26 ಕೊನೆ ದಿನ

|
Google Oneindia Kannada News

ಬೆಂಗಳೂರು, ಮಾರ್ಚ್ 16; ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ತಾಲೂಕು ಮಟ್ಟದಲ್ಲಿ ತಾಲೂಕು ಸಂಯೋಜಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಕರೆದಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 26/3/2021 ಕೊನೆಯ ದಿನವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ತಾಲೂಕು ಮಟ್ಟದಲ್ಲಿ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಿವಿಧ ಹುದ್ದೆಗೆ ಅರ್ಜಿ ಕರೆದ ತುಮಕೂರು ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗೆ ಅರ್ಜಿ ಕರೆದ ತುಮಕೂರು ಜಿಲ್ಲಾ ಪಂಚಾಯಿತಿ

ತಾಂತ್ರಿಕ ಸಂಯೋಜಕರು 3 ಹುದ್ದೆ. ಅರ್ಜಿ ಸಲ್ಲಿಸುವವರು ಸಿವಿಲ್‌ನಲ್ಲಿ ಬಿಇ/ ಎಂ. ಟೆಕ್ ವ್ಯಾಸಂಗ ಮಾಡಿರಬೇಕು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 29,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500)

ಕೋಲಾರ ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ ಕೋಲಾರ ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

 Apply For Taluk Technical Assistant Post In Bengaluru Rural

ತಾಲೂಕು ಐ. ಇ. ಸಿ. ಸಂಯೋಜಕರು 4 ಹುದ್ದೆ. ಅಭ್ಯರ್ಥಿಗಳು MSW/ ಮಾಸ್ ಕಮ್ಯುನಿಕೇಷನ್‌ನಲ್ಲಿ ಯುಜಿ/ ಪಿಜಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 20,000 (ಪ್ರಯಾಣ ಭತ್ಯೆ 2000 ರೂ.).

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ತಾಂತ್ರಿಕ ಸಹಾಯಕರು (ಕೃಷಿ) 1 ಹುದ್ದೆ. ಅಭ್ಯರ್ಥಿಗಳು ಕೃಷಿ ವಿಷಯದಲ್ಲಿ ಬಿಎಸ್‌ಸಿ/ ಎಂಎಸ್‌ಸಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ತಾಂತ್ರಿಕ ಸಹಾಯಕರು (ತೋಟಗಾರಿಕೆ) 1 ಹುದ್ದೆ. ಅಭ್ಯರ್ಥಿಗಳು ತೋಟಗಾರಿಕೆ ವಿಷಯದಲ್ಲಿ ಬಿಎಸ್‌ಸಿ/ ಎಂಎಸ್‌ಸಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಅಭ್ಯರ್ಥಿಗಳ ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ಆಸಕ್ತರು ವೆಬ್ ಸೈಟ್‌ನಲ್ಲಿ ಅರ್ಜಿಗಳನ್ನು ಪಡೆದು ಖುದ್ದಾಗಿ, ಅಂಚೆ ಮೂಲಕ ಸಲ್ಲಿಕೆ ಮಾಡಬೇಕು.

Recommended Video

ಹೊಸ ಅವತಾರದಲ್ಲಿ ಮಹೇಂದ್ರ ಸಿಂಗ್ ಧೋನಿ! | Oneindia Kannada

ಅರ್ಜಿ ಸಲ್ಲಿಕೆಗೆ ವಿಳಾಸ; ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಬೀರಸಂದ್ರ (ಚಪ್ಪರದ ಕಲ್ಲು), ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು 562110.

English summary
Bengaluru Rural zilla panchayat invited applications for the post of taluk technical assistant post. Candidates can apply till March 26, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X