ಮೈಸೂರಿನಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಮೈಸೂರು, ಆಗಸ್ಟ್ 04 : ಮೈಸೂರಿನ ತಿಲಕ್ ನಗರದಲ್ಲಿರುವ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಒಂದು ಪದವೀಧರ ಶಿಕ್ಷಕ ಹಾಗೂ 2 ಸಹಾಯಕ ಶಿಕ್ಷಕರ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.
ಸಹಾಯಕ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು ವಿಶೇಷ ಶಿಕ್ಷಣ (ದೃಷ್ಠಿ ವಿಕಲಚೇತನ) ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದವರಿಗೆ ಮಾಸಿಕ 2,500 ರೂ. ಸಂಭಾವನೆ ನೀಡಲಾಗುತ್ತದೆ.[ಐಸಿಐಸಿಐ ಬ್ಯಾಂಕಿನಲ್ಲಿ Walk in interview]
ಪದವೀಧರ ಸಹಾಯಕ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು. ಆಯ್ಕೆಯಾದವರಿಗೆ ಮಾಸಿಕ 3000 ರೂ. ಸಂಭಾವನೆ ನೀಡಲಾಗುತ್ತದೆ. ಆಸಕ್ತರು ಆಗಸ್ಟ್ 9ರ ಮಧ್ಯಾಹ್ನ 1.30ರೊಳಗೆ ಅರ್ಜಿ ಸಲ್ಲಿಸಬಹುದು.[KPTCL ನಲ್ಲಿ ಕೆಲಸ ಖಾಲಿ ಇದೆ]
ಅರ್ಜಿ ಸಲ್ಲಿಸಲು ವಿಳಾಸ : ಅಧೀಕ್ಷಕರು, ಅಂಧ ಮಕ್ಕಳ ಸರ್ಕಾರಿ ಶಾಲೆ, ತಿಲಕ್ ನಗರ, ಮೈಸೂರು. ಆಗಸ್ಟ್ 9 ರಂದು ಮಧ್ಯಾಹ್ನ 3 ಗಂಟೆಗೆ ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2497496. [ಮಾನವೀಯತೆಯ ಸಾಕ್ಷಾತ್ಕಾರ ಮಾಡಿಸಿದ ಅಂಧ ಮಕ್ಕಳು!]
ಉದ್ಯೋಗವಕಾಶಗಳು
* ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 24, 2016 ಕೊನೆಯ ದಿನ. [ವಿವರಗಳು ಇಲ್ಲಿವೆ]
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ. [ವಿವರ ಇಲ್ಲಿದೆ]