ವಿವಿಧ ಹುದ್ದೆಗೆ ಅರ್ಜಿ ಕರೆದ ಮೈಸೂರು ಜಿಲ್ಲಾ ಪಂಚಾಯಿತಿ
ಮೈಸೂರು, ಮಾರ್ಚ್ 25; ಮೈಸೂರು ಜಿಲ್ಲಾ ಪಂಚಾಯಿತಿ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 31/32021 ಕೊನೆಯ ದಿನವಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ತಾಂತ್ರಿಕ ಸಹಾಯಕರು (ಅರಣ್ಯ/ ಕೃಷಿ) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.
ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ; 402 ಹುದ್ದೆ
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಪಂಚಾಯಿತಿ ಕಚೇರಿ, ಡಿ. ಆರ್. ಡಿ. ಎ. ಶಾಖೆಯಲ್ಲಿ ಪಡೆದು, ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು. ತಾಂತ್ರಿಕ ಸಹಾಯಕರು (ಕೃಷಿ) 3 ಹುದ್ದೆ, ತಾಂತ್ರಿಕ ಸಹಾಯಕರು (ಅರಣ್ಯ) 1 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ
ತಾಂತ್ರಿಕ ಸಹಾಯಕರು (ಅರಣ್ಯ) ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ ಫಾರೆಸ್ಟ್ರಿ ವಿಯದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು. ಎಂಎಸ್ಸಿ ಫಾರೆಸ್ಟ್ರಿ ಅಪೇಕ್ಷಣಿಯ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).
ವಿವಿಧ ಹುದ್ದೆಗೆ ಅರ್ಜಿ ಕರೆದ ಮಂಡ್ಯ ಜಿಲ್ಲಾ ಪಂಚಾಯಿತಿ
ತಾಂತ್ರಿಕ ಸಹಾಯಕರು (ಕೃಷಿ) 1 ಹುದ್ದೆ. ಅಭ್ಯರ್ಥಿಗಳು ಕನಿಷ್ಠ ಕೃಷಿ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು. ಆಪೇಕ್ಷಣಿಯ ಎಂಎಸ್ಸಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).
ಅಭ್ಯರ್ಥಿಗಳು ಸ್ವ-ವಿವರದೊಂದಿಗೆ ಎರಡು ಭಾವಚಿತ್ರ, ಆಧಾರ್/ ಚುನಾವಣಾ ಗುರುತಿನ ಚೀಟಿ, ಎಸ್. ಎಸ್. ಎಲ್. ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಅಂಕಪಟ್ಟಿ, ಸ್ನಾತಕೋತ್ತರ ಅಂಕಪಟ್ಟಿ (ಇದ್ದಲ್ಲಿ) ಕೆಲಸದ ಅನುಭವದ ಪ್ರಮಾಣ ಪತ್ರ ಒಂದು ಸೆಟ್ ನಕಲು ಪ್ರತಿಯನ್ನು ದೃಢೀಕರಿಸಿ ಅರ್ಜಿ ಸಲ್ಲಿಸುವುದು.
5/4/202ರಂದು ಮೈಸೂರಿನಲ್ಲಿ ನಡೆಯುವ ದಾಖಲಾತಿಗಳ ಪರಿಶೀಲನೆಗೆ ಎಲ್ಲಾ ಮೂಲ ದಾಖಲೆಗಳ ಜೊತೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್