ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಸೆಪ್ಟೆಂಬರ್ 16 : ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಮಂಜೂರಾಗಿ ತೆರವಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 21/9/2020 ರೊಳಗೆ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ತಿಳಿಸಿದ್ದಾರೆ.
ಕಾರ್ಯ ನಿರ್ವಾಹಕ ಅಭಿಯಂತರ, ಸಹಾಯಕ ಹಣಕಾಸು ನಿಯಂತ್ರಕರು, ಲೆಕ್ಕಾಧೀಕ್ಷಕರು, ಪ್ರಥಮ ದರ್ಜೆ ಲೆಕ್ಕ ಸಹಾಯಕರು, ಉಪ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸೆ. 21ರ ತನಕ ಅರ್ಜಿಗಳನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಅರ್ಹತಾ ವಿವರಗಳನ್ನು ಮಂಡಳಿಯ www.hkrdb.kar.nic.in ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ. ಆಸಕ್ತರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ
ಕಾರ್ಯ ನಿರ್ವಾಹಕ ಅಭಿಯಂತರ 2, ಸಹಾಯಕ ಹಣಕಾಸು ನಿಯಂತ್ರಕರು 1, ಲೆಕ್ಕಾಧೀಕ್ಷಕರು 1, ಪ್ರಥಮ ದರ್ಜೆ ಲೆಕ್ಕ ಸಹಾಯಕರು 2, ಉಪ ನಿರ್ದೇಶಕರು 1, ಸಹಾಯಕ ಸಾಂಖ್ಯಿಕ ಅಧಿಕಾರಿ 1, ಸಾಂಖ್ಯಿಕ ನಿರೀಕ್ಷಕರು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ನಿವೃತ್ತ ಅಧಿಕಾರಿ/ಸಿಬ್ಬಂದಿ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ಸೂಕ್ತ ದಾಖಲೆಗಳ ಜೊತೆ ಕಾರ್ಯಾಲಯದಲ್ಲಿ ಸೆ.21ರ ಸಂಜೆ 5.30ರ ತನಕ ಅರ್ಜಿ ಸಲ್ಲಿಸಬಹುದು.

ಅರ್ಹತಾ ಷರತ್ತುಗಳು
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 65 ವರ್ಷ ಮೀರಿರಬಾರದು. ನಿವೃತ್ತ ಅಧಿಕಾರಿ/ ಸಿಬ್ಬಂದಿ ತಮ್ಮ ಪಿಂಚಣಿ ಪತ್ರದ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹುದ್ದೆಗಳನ್ನು ಗರಿಷ್ಠ ಒಂದು ವರ್ಷದ ಗುತ್ತಿಗೆ ಅವಧಿಯ ಮೇಲೆ ಮಾತ್ರ ನೇಮಕ ಮಾಡಲಾಗುತ್ತದೆ.

ನೇಮಕಾತಿ ಆದೇಶ
ಸದರಿ ಹುದ್ದೆಗಳು ಭರ್ತಿಯಾಗುವ ತನಕ ಮಾತ್ರ ನೇಮಕಾತಿ ಆದೇಶ ಜಾರಿಯಲ್ಲಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ನೀಡುವ ಸೇವೆಯ ಆಧಾರದ ಮೇಲೆ ಸೇವೆಯನ್ನು ಮುಂದುವರೆಸುವ ಅಥವ ಕಾರ್ಯಕ್ಷಮತೆ ಸರಿ ಇಲ್ಲದಿದ್ದರೆ ಸೇವೆ ರದ್ದುಪಡಿಸುವ ಅಧಿಕಾರ ಪ್ರಾಧಿಕಾರಕ್ಕೆ ಇದೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications