ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ನವೆಂಬರ್ 09; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಐಎ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 14/11/2022ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಟೆಕ್ನಿಕಲ್ ಹೆಡ್ ಕಂಪ್ಯೂಟರ್ ಸೆಕ್ಷನ್ 1, ಸೀನಿಯರ್ ಪ್ರೋಗ್ರಾಮರ್ 3, ಪ್ರೋಗ್ರಾಮರ್ 8, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ 2, ಡೇಟಾ ಅನಲಿಸ್ಟ್ 4, ಟ್ರೈನಿ/ ಅಪ್ರೆಂಟಿಸ್ 3 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿಂದಿನ ಪ್ರಕಟಣೆಗಳ ಅನುಸಾರ ಇ-ಮೇಲ್ ಅಥವ ಖುದ್ದಾಗಿ ರೆಸ್ಯೂಮ್ಗಳನ್ನು ಕಳುಹಿಸಿರುವ/ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ಗೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ [email protected].
ಧಾರವಾಡದಲ್ಲಿ ನೇರ ಸಂದರ್ಶನ; ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಆತ್ಮ ಯೋಜನೆಯಡಿ ಕೃಷಿ ವಿಶ್ವವಿದ್ಯಾಲಯ (ಕೃಷಿ ಮಾರುಕಟ್ಟೆ) ಉಪನಿರ್ದೇಶಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.
ತಾತ್ಕಾಲಿಕ ಈ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಕೃಷಿ ಮಾರುಕಟ್ಟೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ವಿಳಾಸ; ವಿಸ್ತರಣಾ ನಿರ್ದೇಶನಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್ಸೈಟ್ಗೆ ಭೇಟಿ ನೀಡಬಹುದು.
-
ಕರ್ನಾಟಕ ಸರ್ಕಾರ: ಕಲೆ, ಸಾಹಿತ್ಯ ಗಣ್ಯರಿಗೆ ಗೌರವ, ಸಾಂಸ್ಕೃತಿಕ ಪ್ರಶಸ್ತಿಗಳ ಆಯ್ಕೆ ಪಟ್ಟಿ ಪ್ರಕಟ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ











Click it and Unblock the Notifications