ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು
ಬೆಂಗಳೂರು, ಜೂನ್ 22; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 5/7/2021ರೊಳಗೆ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಜಿಲ್ಲಾ ಪಂಚಾಯಿತಿ ಕಚೇರಿ (ಜಲ ಜೀವನ ಮಿಷನ್) ಅಡಿ ಜಿಲ್ಲಾ ಸಂಯೋಜಕರ 5 ಹುದ್ದೆಗಳ ಭರ್ತಿ. ಆಯ್ಕೆಯಾದ ಅಭ್ಯರ್ಥಿಗಳಿಗೆ 22,000 ದಿಂದ 25,000 ರೂ. ವೇತನ ನಿಗದಿ ಮಾಡಲಾಗಿದೆ. ಸ್ಥಳಗಳು, ಹರಪನಹಳ್ಳಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು.

ಜಿಲ್ಲಾ ಪಂಚಾಯಿತಿ ಕಚೇರಿ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಅಡಿ ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರ ಒಂದು ಹುದ್ದೆ ಇದೆ. ಅಭ್ಯರ್ಥಿಗಳಿಗೆ 22,000 ದಿಂದ 25,000 ವೇತನವಿದೆ. ಸ್ಥಳ, ಚಿಕ್ಕಬಳ್ಳಾಪುರ
ಜಿಲ್ಲಾ ಪಂಚಾಯಿತಿ ಕಚೇರಿ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಅಡಿ ನೈರ್ಮಲ್ಯ ಮತ್ತು ಶುಚಿತ್ವ ಸಮಾಲೋಚಕರ 1 ಹುದ್ದೆ ಭರ್ತಿ. 22,000 ದಿಂದ 25,000 ವೇತನ ನಿಗದಿ ಮಾಡಲಾಗಿದೆ. ಸ್ಥಳ, ಚಿಕ್ಕಬಳ್ಳಾಪುರ
ಪ್ರಕಟಣೆ ಹೊರಡಿಸಿದ ದಿನಾಂಕ 19/6/2021ಕ್ಕೆ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ರೆಸ್ಯೂಮ್ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಸಲು ವಿಳಾಸ; ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ. ಹೆಚ್. ಬಿ ಕಟ್ಟಡ, ಕಾವೇರಿ ಭವನ, ಕೆ. ಜಿ. ರಸ್ತೆ, ಬೆಂಗಳೂರು 5600009.
ಅರ್ಜಿಗಳನ್ನು 5/7/2021ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ, ಅರ್ಜಿ ನಮೂನೆಗಾಗಿ https://rdpr.karnataka.gov.in ಮತ್ತು http://swachhamevejayate.org ವೆಬ್ ಸೈಟ್ಗೆ ಭೇಟಿ ನೀಡಬಹು.












Click it and Unblock the Notifications