Yadgir Zilla Panchayat Recruitment 2023 : ಯಾದಗಿರಿ; ಕೆಲಸ ಖಾಲಿ ಇದೆ, ಆನ್ಲೈನ್ನಲ್ಲಿ ಅರ್ಜಿ ಹಾಕಿ
ಯಾದಗಿರಿ, ಜನವರಿ 04; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಯಾದಗಿರಿ ಜಿಲ್ಲಾ ಪಂಚಾಯಿತಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು 7/1/2023ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮೆ. ಬಿ. ಕೆ. ಆರ್. ಸ್ವಾಮಿ ಸೆಕ್ಯೂರಿಟಿ ಏಜೆನ್ಸೀಸ್, ದಾವಣಗೆರೆ ಮೂಲಕ ಹುದ್ದೆ ಭರ್ತಿ ಮಾಡಲಾಗುತ್ತದೆ.
ತಾಂತ್ರಿಕ ಸಹಾಯಕ (ಅರಣ್ಯ) 4, ತಾಂತ್ರಿಕ ಸಹಾಯಕ (ತೋಟಗಾರಿಕೆ) 4, ತಾಂತ್ರಿಕ ಸಹಾಯಕ (ರೇಷ್ಮೆ) ಮತ್ತು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ 6 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಬಿಎಸ್ಸಿ ಫಾರೆಸ್ಟರಿ, ಎಂಎಸ್ಸಿ ಫಾರೆಸ್ಟರಿ ಆಪೇಕ್ಷಣಿಯ. ಸಂಬಂಧಿಸಿದ ಕಾರ್ಯ ಕ್ಷೇತ್ರದಲ್ಲಿ 2 ವರ್ಷ ಅನುಭವ ಆಪೇಕ್ಷಣೀಯ. ವಯೋಮಿತಿ 21-40 ವರ್ಷಗಳು.
ತಾಂತ್ರಿಕ ಸಹಾಯಕ (ತೋಟಗಾರಿಕೆ), ಕನಿಷ್ಠ ವಿದ್ಯಾರ್ಹತೆ ಬಿಎಸ್ಸಿ ತೋಟಗಾರಿಕೆ. ಎಂಎಸ್ಸಿ ಹಾರ್ಟಿಕಲ್ಚರ್ ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಅನುಭವ ಆಪೇಕ್ಷಣೀಯ. ವಯೋಮಿತಿ 21-40 ವರ್ಷಗಳು.
ತಾಂತ್ರಿಕ ಸಹಾಯಕ (ರೇಷ್ಮೆ). ಬಿಎಸ್ಸಿ ಸೆರಿಕಲ್ಚರ್. ಎಂಎಸ್ಸಿ ಸೆರಿಕಲ್ಚರ್ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2 ವರ್ಷ ಅನುಭವ ಅಪೇಕ್ಷಣಿಯ. ವಯೋಮಿತಿ 21-40 ವರ್ಷಗಳು.
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗೆ ಬಿಕಾಂ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಕನ್ನಡ ಮತ್ತು ಇಂಗ್ಲೀಶ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಕಾರ್ಯಾನುಭವ. ವಯೋಮಿತಿ 21-40.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. https://zpyadgiri.karnataka.gov.in/
ಮಹಿಳಾ ತರಬೇತುದಾರ ಹುದ್ದೆಗೆ ಅರ್ಜಿ ಹಾಕಿ; ಉಡುಪಿಯ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಜಿಲ್ಲೆಯ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ಬಾಲಕಿಯರಿಗೆ ಕರಾಟೆ, ಜೂಡೋ, ಟಿಕ್ವೆಂಡೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯಗಳ 6 ತಿಂಗಳ ಅವಧಿಯ ತರಬೇತಿ ನೀಡಲಾಗುತ್ತದೆ.
ಇದಕ್ಕಾಗಿ ಅಂತಾರಾಷ್ಟ್ರೀಯ ಮನ್ನಣೆ ಹೊಂದಿದ ಮಾರ್ಷಲ್ ಆರ್ಟ್ಸ್ಗಳಲ್ಲಿ ಕನಿಷ್ಠ ಬ್ಲಾಕ್ ಬೆಲ್ಟ್ ಪೂರ್ಣಗೊಳಿಸಿರುವ ನುರಿತ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆಗಳು 0820-2574892.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications