ಕಂಟೋನ್ಮೆಂಟ್ ಬೋರ್ಡ್ ಬೆಳಗಾಂನಲ್ಲಿ ವಿವಿಧ ಹುದ್ದೆ ಖಾಲಿ
ಬೆಳಗಾವಿ, ಫೆಬ್ರವರಿ 19; ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 19/3/2020 ಕೊನೆಯ ದಿನವಾಗಿದೆ.
ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ ಚೌಕಿದಾರ್ 1, ಸಫಾಯಿವಾಲಾ 8, ವೈಯರ್ ಮ್ಯಾನ್ 1, ಪ್ರೈಮರಿ ಅಸಿಸ್ಟೆಂಟ್ ಟೀಚರ್ 1, ದ್ವಿತೀಯ ದರ್ಜೆ ಸಹಾಯಕ 1, ಸ್ಟನೋಗ್ರಾಫರ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ.
ಚೌಕಿದಾರ್ (28 ವರ್ಷ) ಮತ್ತು ಸಫಾಯಿವಾಲಾ (25 ವರ್ಷ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 7ನೇ ತರಗತಿ ಪಾಸ್ ಆಗಿರಬೇಕು. ವೈಯರ್ ಮ್ಯಾನ್ (25 ವರ್ಷ) ಹುದ್ದೆಗೆ ಎಸ್ಎಸ್ಎಸ್ಎಲ್ಸಿ ಜೊತೆಗೆ ಇಲೆಕ್ಟ್ರಿಕಲ್ ಐಟಿಐ ಪಾಸ್ ಆಗಿರಬೇಕು ಮತ್ತು ಒಂದು ವರ್ಷದ ಅಪ್ರೆಂಟಿಶಿಪ್ ತರಬೇತಿ ಪಡೆದಿರಬೇಕು.

ಪ್ರೈಮರಿ ಟೀಚರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವವರಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಪಿಯುಸಿ ಪಾಸ್ ಜೊತೆಗೆ ಡಿ. ಇಡಿ ಅಥವ ಪದವಿ ಹಾಗೂ ಬಿ. ಇಡಿ ಪಾಸ್ ಮಾಡಿರಬೇಕು. ಡಿಇಟಿ ಪರೀಕ್ಷೆಯಲ್ಲಿ ಅರ್ಹತೆಗಳಿಸಿರಬೇಕು.
ದ್ವಿತೀಯ ದರ್ಜೆ ಸಹಾಯಕ (25 ವರ್ಷ) ಹುದ್ದೆಗೆ ಪಿಯುಸಿ ಜೊತೆಗೆ ಕಂಪ್ಯೂಟರ್ ನಾಲೆಡ್ಜ್ ಹೊಂದಿರಬೇಕು. ಸ್ಟೆನೋಗ್ರಾಫರ್ (25 ವರ್ಷ) ಹುದ್ದೆಗೆ ಪಿಯುಸಿ ಪಾಸ್ ಮಾಡಿರಬೇಕು ಹಾಗೂ ಸೀನಿಯರ್ ಶಾರ್ಟ್ ಹ್ಯಾಂಡ್/ ಸೀನಿಯರ್ ಟೈಪಿಂಗ್ ಡಿಪ್ಲೊಮಾ ಪದವಿ ಪಡೆದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 17,000 ದಿಂದ 52,650 ರೂ. ತನಕ ವೇತನವನ್ನು ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ; ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ರಿಜಿಸ್ಟರ್ಡ್/ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ವಿಳಾಸ
Chief executive officer
Cantonment Board
BC No. 41, Khanapur Road
Camp Belagavi, Karnataka, India 590001
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://belgaum.cantt.gov.in/
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications