ದಾವಣಗೆರೆ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ದಾವಣಗೆರೆ, ಅಕ್ಟೋಬರ್ 08 : ದಾವಣಗೆರೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (village accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 4, 2015.
ಒಟ್ಟು 25 ಹುದ್ದೆಗಳಿದ್ದು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

http://davanagere.nic.in/ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಸಂಖ್ಯೆ ಮತ್ತು ಅಂಚೆ ಕಚೇರಿಯ ದ್ವಿಪ್ರತಿ ಚಲನ್ ಅನ್ನು ಪಡೆದುಕೊಂಡು ಇ-ಪೇಮೆಂಟ್ ಸೌಲಭ್ಯವಿರುವ ಯಾವುದೇ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. [ಅರ್ಜಿ ಸಲ್ಲಿಸಲು ವಿಳಾಸ]
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಇತರೆ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ನವೆಂಬರ್ 4, ಕೊನೆಯ ದಿನ.
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವ ಸಿಬಿಎಸ್ಸಿ/ಐಸಿಎಸ್ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗಕ್ಕೆ 38 ವರ್ಷ, ಪ.ಜಾ/ಪ.ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಗೊಳಿಸಲಾಗಿದೆ. [ನೇಮಕಾತಿ ಆದೇಶ ಓದಿ]
-
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications