ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಸೆ.21ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : ಧಾರವಾಡದಲ್ಲಿ ಖಾಲಿ ಇರುವ ಯುವಪರಿವರ್ತಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 21ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

 ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ನೇಮಕಾತಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ನೇಮಕಾತಿ

ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ-2012ರನ್ವಯ ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶ.

DHFWS ಕರ್ನಾಟಕ ನೇಮಕಾತಿ: 2815 ಹುದ್ದೆಗಳಿವೆ DHFWS ಕರ್ನಾಟಕ ನೇಮಕಾತಿ: 2815 ಹುದ್ದೆಗಳಿವೆ

Apply For Yuva Parivartak Jobs In Dharwad

ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ, ಧಾರವಾಡ ಇಲ್ಲಿಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಪಿಎಸ್‌ಸಿ ನೇಮಕಾತಿ; ಪದವೀಧರರಿಗೆ ಉದ್ಯೋಗಗಳು ಕೆಪಿಎಸ್‌ಸಿ ನೇಮಕಾತಿ; ಪದವೀಧರರಿಗೆ ಉದ್ಯೋಗಗಳು

ಆಸಕ್ತರು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9448299673/ 6364428497/ 900674224 ನಂಬರ್‌ಗಳಿಗೆ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸಂಪರ್ಕಿಸಬಹುದು.

English summary
Applications invited for the Yuva Parivartak jobs in Dharwad. Candidates can apply till September 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X