ಖಾಲಿ ಇರುವ 990 ಇಂಜಿನಿಯರ್ ಹೊರಗುತ್ತಿಗೆ ಹುದ್ದೆಗಳಿಗೆ ನೇಮಕಾತಿ
ಧಾರವಾಡ, ಡಿಸೆಂಬರ್ 23: ಲೋಕೋಪಯೋಗಿ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ಗಳು ಹಾಗೂ ಸಹಾಯಕ ಇಂಜಿನಿಯರ್ಗಳ ಬಡ್ತಿ, ನಿವೃತ್ತಿ ಮತ್ತಿತರ ಕಾರಣಗಳಿಂದ ಸುಮಾರು 990 ಹುದ್ದೆಗಳು ಖಾಲಿ ಇವೆ.
ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಡಿಪ್ಲೋಮಾ ಮತ್ತು ಬಿ.ಇ ಪದವಿ ಪಡೆದಿರುವ ಅರ್ಹ ಯುವಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ಅವರು ಹೇಳಿದರು.
KSHDCL ನೇಮಕಾತಿ; ಜನವರಿ 20ರ ತನಕ ಅರ್ಜಿ ಹಾಕಿ
ಧಾರವಾಡ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನೀಯರ್ಗಳ ಕೊರತೆಯನ್ನು ತುರ್ತಾಗಿ ಸರಿದೂಗಿಸಲು ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಡಿಪ್ಲೋಮಾ ಮತ್ತು ಪದವೀಧರ ಇಂಜಿನೀಯರ್ಗಳನ್ನು ನೇಮಿಸಿಕೊಳ್ಳಲು ಇಂದು ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.
ಸರ್ಕಾರದ ಅಧಿಕೃತ ಮಾನವ ಸಂಪನ್ಮೂಲ ಏಜೆನ್ಸಿಗಳಿಗೆ ಆದ್ಯತೆ ನೀಡಲಾಗುವುದು. ಈ ಕ್ರಮದಿಂದ ಸ್ಥಳೀಯ ಯುವಕರು ಹಾಗೂ ಅರ್ಹ ಪದವೀಧರ ಇಂಜಿನೀಯರ್ಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ಸಹಾಯವಾಗಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿಳಿಸಿದರು.