ಬೆಂಗಳೂರಿನಲ್ಲಿ ಮಹಿಳಾ ಅಗ್ನಿವೀರರ ನೇಮಕಾತಿ ರ್ಯಾಲಿ : ಅರ್ಜಿ ಸಲ್ಲಿಸುವುದು ಹೇಗೆ
ಸೇನಾ ಪೊಲೀಸರ ಸಾಮಾನ್ಯ ಕರ್ತವ್ಯಕ್ಕಾಗಿ ಅಗ್ನಿಪಥ್ ಯೋಜನೆಯಡಿ ಮಹಿಳೆಯರಿಗಾಗಿ ಸೇನಾ ನೇಮಕಾತಿ ರ್ಯಾಲಿ ನವೆಂಬರ್ 1 ರಿಂದ 3 ರವರೆಗೆ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ತಿಳಿಸಿದೆ.
ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆಗೆ ಸೇರಿದ ಮಹಿಳಾ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ಯಾವುದೇ ಕಾರಣವನ್ನು ನೀಡದೆ ಯಾವುದೇ ಸಮಯದಲ್ಲಿ ರ್ಯಾಲಿಯನ್ನು ರದ್ದುಗೊಳಿಸಬಹುದು ಅಥವಾ ಮುಂದೂಡಬಹುದು ಎಂದು ರಕ್ಷಣಾ ಸಚಿವಾಲಯ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.
ಆಗಸ್ಟ್ 9 ರಿಂದ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದು, ನೋಂದಣಿ ಪ್ರಕ್ರಿಯೆ ಸೆಪ್ಟೆಂಬರ್ 7ರಂದು ಮುಕ್ತಾಯಗೊಳ್ಳಲಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡು ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಪಡೆದುಕೊಳ್ಳಬಹುದಾಗಿದೆ.
ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ನಾಲ್ಕು ವರ್ಷಗಳ ಸೇವಾವಧಿ ಇರುತ್ತದೆ. ಆರು ತಿಂಗಳ ಕಾಲ ಅಗ್ನಿವೀರರಿಗೆ ತರಬೇತಿ ನೀಡಲಾಗುತ್ತದೆ. ನಾಲ್ಕು ವರ್ಷಗಳ ಸೇವಾವಧಿ ನಂತರ ಶೇಕಡ 25 ರಷ್ಟು ಅಗ್ನಿವೀರರನ್ನು ಸೇನೆಯಲ್ಲಿ ಮುಂದುವರೆಸುವ ಅವಕಾಶ ಇದೆ.

ಅಗ್ನಿವೀರರ ಅರ್ಹತಾ ಮಾನದಂಡಗಳು
ಅರ್ಹ ಅಭ್ಯರ್ಥಿಗಳು 17.5 ರಿಂದ 23 ವರ್ಷ ವಯಸ್ಸಿನವರಾಗಿರಬೇಕು, ಅಭ್ಯರ್ಥಿಗಳು 162 ಸೆಂಟಿಮೀಟರ್ ಎತ್ತರ ಇರಬೇಕು. ಅಭ್ಯರ್ಥಿಗಳು 10ನೇ ತರಗತಿ/ಮೆಟ್ರಿಕ್ನಲ್ಲಿ ಒಟ್ಟು ಶೇಕಡ 45 ಅಂಕಗಳೊಂದಿಗೆ ಮತ್ತು ಪ್ರತಿ ವಿಷಯದಲ್ಲಿ ಶೇಕಡ 33 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಮಾನ್ಯಗೊಂಡ ಲೈಟ್ ಮೋಟಾರ್ ವೆಹಿಕಲ್ (ಎಲ್ಎಂವಿ) ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಚಾಲಕ ಅವಶ್ಯಕತೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಗ್ನಿವೀರ ರ್ಯಾಲಿಗೆ ನೋಂದಣಿ ಹೇಗೆ?
ಅಗ್ನಿವೀರ ನೇಮಕಾತಿಗೆ ಅಭ್ಯರ್ಥಿಗಳ ಅರ್ಹತೆಯ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಪ್ರೊಫೈಲ್ ರಚಿಸಲು www.joinindianarmy.nic.in ಗೆ ಲಾಗ್ ಇನ್ ಮಾಡಬೇಕಾಗುತ್ತದೆ. ನೀವು ರಾಜ್ಯ, ಜಿಲ್ಲೆ, ಹುಟ್ಟಿದ ದಿನಾಂಕ, ವೈವಾಹಿಕ ಸ್ಥಿತಿ, ಲಿಂಗ, ವಿದ್ಯಾರ್ಹತೆ ಮುಂತಾದ ವಿವರಗಳನ್ನು ಒದಗಿಸಬೇಕಾಗುತ್ತದೆ.
ನೀವು ಅರ್ಹರಾಗಿದ್ದರೆ, ಪ್ರೊಫೈಲ್ ಅನ್ನು ಯಶಸ್ವಿಯಾಗಿ ರಚಿಸಲಾಗುತ್ತದೆ. ಅಭ್ಯರ್ಥಿಗಳು ರ್ಯಾಲಿ ನಡೆಯುವ ಸ್ಥಳಕ್ಕೆ ಕೊಂಡೊಯ್ಯಬೇಕಾದ ಪ್ರವೇಶ ಪತ್ರವನ್ನು ಪಡೆಯಲು ಅಕ್ಟೋಬರ್ 12 ರಿಂದ 31 ರ ನಡುವೆ ಲಾಗಿನ್ ಮಾಡಬೇಕಾಗುತ್ತದೆ.

ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ
ಅಭ್ಯರ್ಥಿಗಳು 1.6 ಕಿಲೋಮೀಟರ್ ಓಟ, 10 ಅಡಿ ಲಾಂಗ್ ಜಂಪ್ ಮತ್ತು 3 ಅಡಿ ಎತ್ತರ ಜಿಗಿತದದೊಂದಿಗೆ ದೈಹಿಕ ಸಾಮರ್ಥ್ಯಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ. ಅಂಗವೈಕಲ್ಯ ಮತ್ತು ಗರ್ಭಾವಸ್ಥೆಯನ್ನು ದೃಢಪಡಿಸಲು ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ.
ಯಾವುದೇ ರೀತಿಯ ಅಂಗವೈಕಲ್ಯ ಅಥವಾ ಗರ್ಭವಾಸ್ಥೆ ಕಂಡುಬಂದರೆ ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಲಾಗುತ್ತದೆ. ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾದ ಯಾವುದೇ ಅಭ್ಯರ್ಥಿಯನ್ನು 'ಅನರ್ಹ' ಎಂದು ಘೋಷಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ. ದೇಹದ ಮೇಲೆ ಹಚ್ಚೆಗಳನ್ನು ಹೊಂದಿರುವ ಆಕಾಂಕ್ಷಿಗಳನ್ನು ಮುಂದಿನ ಆಯ್ಕೆಯಿಂದ ನಿರ್ಬಂಧಿಸಬಹುದು.

ಅಗ್ನಿವೀರರ ನೇಮಕಾತಿಗೆ ಬೇಕಾದ ದಾಖಲೆಗಳು
ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಎಂಬ ಲಿಖಿತ ಪರೀಕ್ಷೆಯನ್ನು ಸೈಟ್ನಲ್ಲಿ ನಡೆಸಲಾಗುತ್ತದೆ. ರ್ಯಾಲಿಯಲ್ಲಿ ಪಾಲ್ಗೊಳ್ಳಲು ಅಗ್ನಿವೀರ ಆಕಾಂಕ್ಷಿಗಳು ಈ ದಾಖಲೆಗಳನ್ನು ಸ್ಥಳಕ್ಕೆ ಕೊಂಡೊಯ್ಯಬೇಕಾಗುತ್ತದೆ: ವ್ಯಾಕ್ಸಿನೇಷನ್ ಪ್ರಮಾಣಪತ್ರ, ಪ್ರವೇಶ ಕಾರ್ಡ್, ಭಾವಚಿತ್ರ (ಪಾಸ್ಪೋರ್ಟ್ ಗಾತ್ರ), ಶಿಕ್ಷಣ ಮತ್ತು ವಾಸಸ್ಥಳ ಪ್ರಮಾಣಪತ್ರಗಳು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಧರ್ಮ/ಜಾತಿ/ವರ್ಗ ಪ್ರಮಾಣಪತ್ರಗಳು, ಪಾತ್ರ ಪ್ರಮಾಣಪತ್ರಗಳು, ಇತರವುಗಳು.
ಕರ್ನಾಟಕದ 14 ಜಿಲ್ಲೆಗಳ ಪುರುಷರಿಗಾಗಿ ಅಗ್ನಿವೀರ್ ನೇಮಕಾತಿ ರ್ಯಾಲಿಯು ಹಾಸನದಲ್ಲಿ ಬುಧವಾರ ಪ್ರಾರಂಭವಾಗಿದೆ. ರ್ಯಾಲಿಯನ್ನು ಆಗಸ್ಟ್ 27 ರವರೆಗೆ ಮುಂದುವರೆಯಲು ನಿರ್ಧರಿಸಲಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications