ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸಿ
ಬಳ್ಳಾರಿ,ಜು.12: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗೌರವಧನ ಆಧಾರದ ಮೇಲೆ ಡೇ-ನಲ್ಮ್ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮಹಾನಗರ ಪಾಲಿಕೆ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘದ ಸದಸ್ಯರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.
ಹುದ್ದೆಯ
ಹೆಸರು:
ಸಮುದಾಯ
ಸಂಪನ್ಮೂಲ
ವ್ಯಕ್ತಿ,
ಹುದ್ದೆಯ
ಸಂಖ್ಯೆ:
02,
ಗೌರವಧನ
ಮಾಸಿಕ
ರೂ.8
ಸಾವಿರ,
ಟಿ.ಎ
ಗರಿಷ್ಠ
ರೂ.2ಸಾವಿರ
ಆಗಿರುತ್ತದೆ.
ಅರ್ಹತೆ: ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಹೊಂದಿದಂತಹ ಸ್ವ-ಸಹಾಯ ಸಂಘದ ಸದಸ್ಯರು ಸಹ ಅರ್ಜಿ ಸಲ್ಲಿಸಬಹುದು.
ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಪ್ರಮಾಣ ಪತ್ರ ಹೊಂದಿರತಕ್ಕದ್ದು. ಸ್ವಸಹಾಯ ಸಂಘವು ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯತ್ವವನ್ನು ಹೊಂದಿರಬೇಕು. ಮಹಾನಗರಪಾಲಿಕೆ ವ್ಯಾಪ್ತಿಯ ಸ್ವಸಹಾಯ ಸಂಘದಲ್ಲಿ ಕನಿಷ್ಠ 3 ವರ್ಷದಿಂದ ಸದಸ್ಯರಾಗಿರಬೇಕು /ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಾಗಿರಬೇಕು.
ಅಭ್ಯರ್ಥಿಯು ಸ್ವಸಹಾಯ ಸಂಘದಿಂದ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿಸಿರಬೇಕು/ಚಾಲ್ತಿಯಲ್ಲಿರಬೇಕು. ಅಭ್ಯರ್ಥಿಯು ಸ್ವಸಹಾಯ ಸಂಘದಿಂದ ಪಡೆದ ಸಾಲ ಮರುಪಾವತಿಸದೇ ಸುಸ್ತಿದಾರರಾಗಿರಬಾರದು.
ವಯೋಮಿತಿ: ವಯಸ್ಸು 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಸ್ವ-ಸಹಾಯ ಸಂಘ ನಿರ್ವಹಿಸಬೇಕಿರುವ ಪುಸ್ತಕಗಳು ಹಾಗೂ ವಹಿಗಳ ಬಗ್ಗೆ ಜ್ಞಾನ ಹೊಂದಿರಬೇಕು. ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಯಾವುದೇ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರಬಾರದು. ಬೇರೆ ಬೇರೆ ಸ್ಥಳಗಳಲ್ಲಿ/ಜಿಲ್ಲೆಗಳಲ್ಲಿ/ ಹೊರ ರಾಜ್ಯಗಳಲ್ಲಿ ನೀಡುವ ತರಬೇತಿ ಅಥವಾ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ದರಿರಬೇಕು.
ಅರ್ಜಿ
ಸಲ್ಲಿಸುವ
ವಿಧಾನ:
ಆಸಕ್ತ
ಅಭ್ಯರ್ಥಿಗಳು
ಮಹಾನಗರಪಾಲಿಕೆಯ(ವಲಯ
ಕಚೇರಿ-2)
ಡೇ-ನಲ್ಮ್
ಶಾಖೆ,
ಇಲ್ಲಿ
ಸಂಪರ್ಕಿಸಿ
ನಿಗದಿತ
ನಮೂನೆ
ಅರ್ಜಿಯನ್ನು
ಪಡೆದುಕೊಂಡು
ಅರ್ಜಿ
ಹಾಗೂ
ದೃಢೀಕೃತ
ದಾಖಲೆಗಳನ್ನು
ಜು.22ರೊಳಗಾಗಿ
ಮಹಾನಗರಪಾಲಿಕೆ
ಕಚೇರಿಗೆ
ಸಲ್ಲಿಸಬೇಕು.
ತದನಂತರ
ಸಲ್ಲಿಸಲಾಗುವ
ಅರ್ಜಿಗಳನ್ನು
ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.08392-273479/278168ಗೆ ಸಂಪರ್ಕಿಸಬಹುದು