SBI Jobs 2024: ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಒಳ್ಳೆ ಅವಕಾಶ, ಎಸ್ಬಿಐನಲ್ಲಿ ನೇಮಕಾತಿ ಪ್ರಾರಂಭ
ಬ್ಯಾಂಕಿಂಗ್ ಫಿಲ್ಡ್ನಲ್ಲಿ ಕೆಲಸ ಮಾಡುವ ಆಸೆ ಇರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ದೇಶದ ಪ್ರತಿಷ್ಠಿತ ಬ್ಯಾಂಕ್ ಎಸ್ಬಿಐ ಉದ್ಯೋಗವಕಾಶ ನೀಡುತ್ತಿದೆ. ಈ ತಿಂಗಳು ಸುಮಾರು 12 ಸಾವಿರ ಮಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಂದರೆ ಎಸ್ಬಿಐ 12 ಸಾವಿರ ಉದ್ಯೋಗಿಗಳಿಗೆ ಉದ್ಯೋಗ ನೀಡಲಿದೆ. ಮಾಹಿತಿ ತಂತ್ರಜ್ಞಾನ (ಐಟಿ) ಹೊರತುಪಡಿಸಿ, ಬ್ಯಾಂಕ್ ಸುಮಾರು 12,000 ಉದ್ಯೋಗಿಗಳನ್ನು ವಿವಿಧ ಕೆಲಸಗಳಿಗೆ ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಿದೆ. ಐಟಿ ಜೊತೆಗೆ ಈ ಉದ್ಯೋಗಿಗಳಿಗೆ ವಿಭಿನ್ನ ಕೆಲಸಗಳಿಗೆ ತರಬೇತಿಯನ್ನೂ ನೀಡಲಾಗುವುದು.

ಉದ್ಯೋಗಿ ನೇಮಕಾತಿ ಪ್ರಕ್ರಿಯೆ
ಎಸ್ಬಿಐ ನೇಮಕಾತಿ ಬಗ್ಗೆ ಎಸ್ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರ ಮಾಹಿತಿ ಹಂಚಿಕೊಂಡಿದ್ದಾರೆ. ಹೊಸದಾಗಿ ನೇಮಕಗೊಂಡಿರುವ ಈ ಉದ್ಯೋಗಿಗಳಿಗೆ ಬ್ಯಾಂಕಿಂಗ್ ಸುತ್ತ ಮಾತ್ರ ಮಾನ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಅವರಲ್ಲಿ ಕೆಲವರನ್ನು ಮುಂದಿನ ದಿನಗಳಲ್ಲಿ ಐಟಿ ಮತ್ತು ಇತರ ಕೆಲಸಗಳಿಗೆ ವರ್ಗಾಯಿಸಲಾಗುವುದು ಎಂದು ಅವರು ಹೇಳಿದರು. ಸಾಮಾನ್ಯ ಉದ್ಯೋಗಿಗಳಾದ ಸುಮಾರು 11,000 ರಿಂದ 12,000 ಉದ್ಯೋಗಿಗಳು ನೇಮಕಾತಿ ಪ್ರಕ್ರಿಯೆಯಲ್ಲಿದ್ದಾರೆ.
ನೇಮಕಾತಿ ಆರಂಭವಾಗಿದೆ
ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷಕ್ಕೆ ನೇಮಕಾತಿಯನ್ನು ಪ್ರಾರಂಭಿಸಲಾಗಿದೆ. ಬ್ಯಾಂಕ್ನ ಒಟ್ಟು ಉದ್ಯೋಗಿಗಳ ಸಂಖ್ಯೆ 2 ಲಕ್ಷ 32 ಸಾವಿರದ ಇನ್ನೂರ ತೊಂಬಾತ್ತಾರು. ಇದು ಆರ್ಥಿಕ ವರ್ಷ 23 ರಲ್ಲಿ 2 ಲಕ್ಷದ 35 ಸಾವಿರದ 8 ನೂರ 58 ಆಗಿತ್ತು. ಹೊಸ ಉದ್ಯೋಗಿಗಳನ್ನು ನೇಮಿಸಲು ಬ್ಯಾಂಕ್ ವಿಶೇಷವಾಗಿ ತಂತ್ರಜ್ಞಾನ ಕೌಶಲ್ಯಗಳನ್ನು ಪರಿಗಣಿಸುತ್ತಿದೆ. ಇತ್ತೀಚೆಗೆ, ತಂತ್ರಜ್ಞಾನ ಕೌಶಲ್ಯಗಳ ನೇಮಕಾತಿಯನ್ನು ಪ್ರಾರಂಭಿಸಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ದಿನೇಶ್ ಕುಮಾರ್ ಖಾರ ಹೇಳಿದ್ದಾರೆ.

2023-24ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಪ್ರತಿ ಈಕ್ವಿಟಿ ಷೇರಿನ ಮೇಲೆ ರೂ 13.70 ಲಾಭಾಂಶವನ್ನು ಘೋಷಿಸಿದೆ. ತನ್ನ ನಿವ್ವಳ ಎನ್ಪಿಎ ಮಾರ್ಚ್ 31, 2024 ರಂದು ಒಂದು ವರ್ಷದ ಹಿಂದೆ 0.67 ಶೇಕಡಾದಿಂದ 0.57 ಶೇಕಡಾಕ್ಕೆ ಇಳಿದಿದೆ ಎಂದು ಮಾಹಿತಿ ನೀಡಿದೆ. ಕಂಪನಿಯ ಆದಾಯವು ನಾಲ್ಕನೇ ತ್ರೈಮಾಸಿಕದಲ್ಲಿ 1.06 ಲಕ್ಷ ಕೋಟಿ ರೂಪಾಯಿಗಳಿಂದ 1.28 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications