BBMP Recruitment: ಅತಿಥಿ ಶಿಕ್ಷಕರು-ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ, ವೇತನ ವಿವರ
ಬೆಂಗಳೂರು, ಜೂನ್ 09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದಡಿ 'ಅತಿಥಿ ಶಿಕ್ಷಕರು' ಹಾಗೂ 'ಅತಿಥಿ ಉಪನ್ಯಾಸಕರ' ನೇಮಕಕ್ಕೆ ಆದೇಶವನ್ನು ಶನಿವಾರ ಹೊರಡಿಸಿದೆ.
ಬೆಂಗಳೂರು ವ್ಯಾಪ್ತಿಯಲ್ಲಿರುವ ಬಿಬಿಎಂಪಿಯ ಶಾಲಾ ಕಾಲೇಜುಗಳಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ' (SDMC) ಹಾಗೂ 'ಕಾಲೇಜು ಅಭಿವೃದ್ಧಿ ಸಮಿತಿ' (CDC) ಮುಖೇನ ಹೊರಗುತ್ತಿಗೆ ಆಧಾರದಲ್ಲಿ ಅತಿಥಿ ಶಿಕ್ಷಕರು-ಉಪನ್ಯಾಸಕರ ನೇಮಿಸಿಕೊಳ್ಳಬೇಕು ಎಂದು ಗಡುವು ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶದ ಮೂಲಕ ಸೂಚನೆ ನೀಡಿದ್ದಾರೆ.

ಜೂನ್ 16ರೊಳಗೆ ನೇಮಕಕ್ಕೆ ಸೂಚನೆ
2024-2025ರ ಶೈಕ್ಷಣಿಕ ಸಾಲಿಗೆ ಬಿಬಿಎಂಪಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅತಿಥಿ ಶಿಕ್ಷಕರು ಇದೇ ಜೂನ್ 16ರೊಳಗೆ ನೇಮಕ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಈ ಹಿಂದೆ ಬಿಬಿಎಂಪಿ ಸೆಕ್ಯೂರಿಟಿ ಏಜೆನ್ಸಿ ಮೂಲಕ ಹೊರ ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ಕೈ ಬಿಟ್ಟ ಬಿಬಿಎಂಪಿ, ಎಸ್ಡಿಎಂಸಿ ಹಾಗೂ ಸಿಡಿಸಿ ಮೂಲಕ ನೇಮಕಾತಿ ಮುಂದಾಗಿ ಆದೇಶ ಮಾಡಿದೆ.
ಶಿಶುವಿಹಾರ ಶಾಲೆಗಳಿಗೆ ಬೇಕಾಗಿರುವ ಶಿಕ್ಷಕರನ್ನು ಶಿಶಿವಿಹಾರಗಳಿಗೆ ಹತ್ತಿರವಿರುವ ಪ್ರಾಥಮಿಕ ಶಾಲಾ ಮುಖ್ಯಸ್ಥರು ಎಸ್ಡಿಎಂಸಿ ಮೂಲಕ ನಿಯೋಜಿಸಬೇಕು ಎಂದು ಪಾಲಿಕೆ ಹೇಳಿದೆ.
ಇದರೊಂದಿಗೆ ಶಾಲಾ-ಕಾಲೇಜುಗಳಲ್ಲಿ ಸೂಚನಾ ಫಲಕದಲ್ಲಿ ಪ್ರಕಟಣೆ ಹೊರಡಿಸಬೇಕು. ನೇಮಕಕ್ಕೆ ಬರುವ ಅರ್ಜಿಗಳನ್ನು ಸಮಿತಿಯಲ್ಲಿ ಮಂಡಿಸಿ ನೇಮಕ ಮಾಡಿಕೊಳ್ಳಬೇಕು. 2017ರಲ್ಲಿ ಕೌನ್ಸಿಲ್ ನಿರ್ಣಯದಂತೆ ಗೌರವ ಸಂಭಾವನೆ ನಿಗದಿ ಪಡಿಸಲಾಗಿದೆ.
ಯಾವ ಶಿಕ್ಷಕರಿಗೆ ಎಷ್ಟಿದೆ ವೇತನ? ಪಟ್ಟಿ
ಅತಿಥಿ ಶಿಕ್ಷಕರು (ಶಿಶುವಿಹಾರ/ಪ್ರಾಥಮಿಕ ಶಾಲೆ) - ಮಾಸಿಕ ವೇತನ 19336 ರೂ.
ಅತಿಥಿ ಶಿಕ್ಷಕರು (ಪ್ರೌಢಶಾಲೆ) - ಮಾಸಿಕ ವೇತನ 22840 ರೂ.
ಅತಿಥಿ ಉಪನ್ಯಾಸಕ (ಪಿಯುಸಿ) - ಮಾಸಿಕ ವೇತನ 22567 ರೂ.
ಅತಿಥಿ ಉಪನ್ಯಾಸಕ (ಪದವಿ) - ಮಾಸಿಕ ವೇತನ 27897 ರೂ.
ಅತಿಥಿ ಉಪನ್ಯಾಸಕ (ಸ್ನಾತಕೋತ್ತರ ಪದವಿ)- ಮಾಸಿಕ ವೇತನ 30897
ಅತಿಥಿ ಉಪನ್ಯಾಸಕ (ಗಣಕಯಂತ್ರ)- ಮಾಸಿಕ ವೇತನ 22053 ರೂ.
ಸದ್ಯ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳು ಜೂನ್ 01ರಿಂದ ಆರಂಭವಾಗಿವೆ. ಈ ಕಾರಣದಿಂದ ಜೂನ್ 16ರೊಳಗೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಬಿಬಿಎಂಪಿ ಕಟ್ಟುನಿಟ್ಟಿನ ಸೂಚನೆ ನೀಡಿ ಆದೇಶ ಹೊರಡಿಸಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications