AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಮ್ಮ ದೈನಂದಿನ ಕೆಲಸಗಳನ್ನು ಸುಲಭಗೊಳಿಸಿದೆ ಎಂಬುದು ನಿಜ. ಆದರೆ, ಉದ್ಯೋಗ ಹುಡುಕುವ ಪ್ರಕ್ರಿಯೆಯಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಸಹ ಬೀರುತ್ತಿದೆ. ಹೌದು, ಕೇವಲ ಕೃತಕ ಬುದ್ಧಿಮತ್ತೆಯನ್ನು ಬಳಸಿ, ಯಾವುದೇ ಸ್ವಂತ ಶ್ರಮವಿಲ್ಲದೆ ಕಾಪಿ-ಪೇಸ್ಟ್ ಮಾಡಿ ಅರ್ಜಿ ಸಲ್ಲಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದಾಗಿ ನೈಜ ಪ್ರತಿಭೆಗಳನ್ನು ಮತ್ತು ಕೌಶಲ್ಯವುಳ್ಳ ಅಭ್ಯರ್ಥಿಗಳನ್ನು ಗುರುತಿಸುವುದು ಕಂಪನಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಬೆಂಗಳೂರು ಮೂಲದ ಸ್ಟಾರ್ಟ್-ಅಪ್ 'ಟೇಕ್ ಯು ಫಾರ್ವರ್ಡ್' (takeUforward) ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿರುವ ಅವರು, ಪ್ರಸ್ತುತ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಅತಿ ದೊಡ್ಡ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ. "ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯು ತುಂಬಾ ಗದ್ದಲದಿಂದ (noise) ಕೂಡಿದೆ. ದೊಡ್ಡ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿವೆ, ಆದರೆ ಗುಣಮಟ್ಟದ ಅಭ್ಯರ್ಥಿಗಳ ಕೊರತೆ ಎದ್ದು ಕಾಣುತ್ತಿದೆ. ನಾನು ಸುಮ್ಮನೆ ಈ ಮಾತನ್ನು ಹೇಳುತ್ತಿಲ್ಲ. ಪ್ರಸ್ತುತ ನೇಮಕಾತಿ ಮಾಡುತ್ತಿರುವ ಯಾರನ್ನು ಬೇಕಾದರೂ ಕೇಳಿ ನೋಡಿ, ಅವರು ಇದೇ ಪರಿಸ್ಥಿತಿಯನ್ನು ವಿವರಿಸುತ್ತಾರೆ" ಎಂದು ಅವರು ಬರೆದುಕೊಂಡಿದ್ದಾರೆ.

ಕೇವಲ ಒಬ್ಬ ಅಭ್ಯರ್ಥಿ ಆಯ್ಕೆ
ತಮ್ಮದೇ ಕಂಪನಿಯ ನೇಮಕಾತಿಯ ಉದಾಹರಣೆ ನೀಡಿದ ರಾಜ್, ಇತ್ತೀಚೆಗೆ ತಮ್ಮ ಸಂಸ್ಥೆಯಲ್ಲಿ ಯೂಸರ್ ಎಕ್ಸ್-ಪೀರಿಯನ್ಸ್ (UX) ಹುದ್ದೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಎಂದು ತಿಳಿಸಿದ್ದಾರೆ. ಬಂದಂತಹ ರೆಸ್ಯೂಮ್ಗಳ ಆಧಾರದ ಮೇಲೆ ಕೆಲವು ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿತ್ತು. ಆದರೆ, ಮೊದಲ ಸುತ್ತಿನ ಮೌಲ್ಯಮಾಪನವು ತೀವ್ರ ನಿರಾಸೆ ಮೂಡಿಸಿತು ಎಂದು ಅವರು ಹೇಳಿದ್ದಾರೆ.
ಬಹುಪಾಲು ಅಭ್ಯರ್ಥಿಗಳು ನೀಡಿದ್ದ ಅಸೈನ್ಮೆಂಟ್ಗಳು ಎಐ ಪರಿಕರಗಳ ಸಹಾಯದಿಂದ ಸಂಪೂರ್ಣವಾಗಿ ಕಾಪಿ ಮಾಡಿದ್ದಾಗಿವೆ. ಅದರಲ್ಲಿ ಅಭ್ಯರ್ಥಿಗಳ ಸ್ವಂತ ಶ್ರಮ, ಸಂಶೋಧನೆ ಅಥವಾ ಆ ಹುದ್ದೆಯ ಕುರಿತಾದ ಯಾವುದೇ ಕನಿಷ್ಠ ತಿಳುವಳಿಕೆ ಇರಲಿಲ್ಲ. "ಇದೊಂದು ಸರಳವಾದ ಕಾಪಿ-ಪೇಸ್ಟ್ ಕೆಲಸವಾಗಿತ್ತು. ಶಾರ್ಟ್ಲಿಸ್ಟ್ ಆದ ಸುತ್ತಿನಲ್ಲಿ ಅಭ್ಯರ್ಥಿಗಳಿಂದ ಶೂನ್ಯ ಶ್ರಮ ಮತ್ತು ಶೂನ್ಯ ಸಂಶೋಧನೆ ಕಂಡುಬಂತು" ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
I’m not saying this out of the blue - talk to anyone who’s hiring, and they’ll tell you the state. Too much noise, quality people are less.
— Striver | Building takeUforward (@striver_79) March 19, 2026
We were hiring for a UX role. All we got in Round 1 (shortlisted from resumes) was AI slop: simple copy-paste, zero effort, zero research… https://t.co/7zJJH8eO1b
ಅಂತಿಮವಾಗಿ ಈ ಹಂತಕ್ಕೆ ತಲುಪಿದ್ದ 35 ಅಭ್ಯರ್ಥಿಗಳಲ್ಲಿ ಕೇವಲ ಒಬ್ಬರು ಮಾತ್ರ ಅಸಲಿ ಶ್ರಮ ಮತ್ತು ಸ್ವಂತಿಕೆ ಪ್ರದರ್ಶಿಸಿದ್ದರು. "35 ಜನರಲ್ಲಿ ಕೇವಲ ಒಬ್ಬರು ಮಾತ್ರ ಎಐ ಕಾಪಿ-ಪೇಸ್ಟ್ ಮಾಡದೆ, ಸ್ವಂತ ಶ್ರಮ ಹಾಕಿ ಕೆಲಸ ಮಾಡಿದ್ದರು. ಹಾಗಾಗಿ ಅವರನ್ನೇ ಆ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿದೆ. ಉಳಿದವರು ಕನಿಷ್ಠ ಸಿದ್ಧತೆಯನ್ನೂ ಮಾಡಿಕೊಂಡಿರಲಿಲ್ಲ" ಎಂದು ರಾಜ್ ವಿಕ್ರಮಾದಿತ್ಯ ವಿವರಿಸಿದ್ದಾರೆ.
ನೆಟ್ಟಿಗರ ಪ್ರತಿಕ್ರಿಯೆ
ರಾಜ್ ಅವರ ಈ ಪೋಸ್ಟ್ ವೈರಲ್ ಆಗಿದ್ದು, ಅನೇಕರು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. "ಎಐ ಬಳಸಿ ರೆಸ್ಯೂಮ್ ಸಿದ್ಧಪಡಿಸುವುದು ಈಗ ಸಾಮಾನ್ಯವಾಗಿದೆ. ರೆಸ್ಯೂಮ್ಗಳು ನೋಡಲು ಅತ್ಯುತ್ತಮವಾಗಿ ಕಾಣುತ್ತವೆ, ಆದರೆ ನೇರ ಸಂದರ್ಶನದಲ್ಲಿ ಅಭ್ಯರ್ಥಿಯ ಅಸಲಿ ಕೌಶಲ್ಯ ಬಯಲಾಗುತ್ತದೆ" ಎಂದು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು, "ಎಐ ಹೊರಗಿನ ಮೆರಗು ನೀಡಬಹುದು, ಆದರೆ ಮನುಷ್ಯನ ಶ್ರಮವನ್ನು ನಕಲು ಮಾಡಲು ಅದಕ್ಕೆ ಸಾಧ್ಯವಿಲ್ಲ" ಎಂದಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ













Click it and Unblock the Notifications