ಬೆಂಗಳೂರು: ಸಹಕಾರ ನಗರದಲ್ಲಿ ಮೇ 28ರಂದು ಉದ್ಯೋಗ ಮೇಳ
ಬೆಂಗಳೂರು ಮೇ 26: ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೃಷ್ಣ ಭೈರೇಗೌಡ ಅವರ ಸ್ವಯಂ ಸೇವಕರ ತಂಡದ ವತಿಯಿಂದ ಶನಿವಾರ ಮೇ 28 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್ಎಸ್ಎಲ್ಸಿ, ಐಟಿಐ, ಇಂಜಿನಿಯರಿಂಗ್ ಸೇರಿದಂತೆ ಯಾವುದೇ ಪದವಿಧರರು ಕೂಡಾ ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗಾವಕಾಶಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಸಹಕಾರ ನಗರದ ದೇವ್-ಇನ್ ಶಾಲೆಯಲ್ಲಿ ಶನಿವಾರ ಬೆಳಗ್ಗೆ 9 ಗಂಟೆಯಿಂದ ಈ ಮೇಳ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ 080-23626678 ಗೆ ಸಂಪರ್ಕಿಸಲು ಕೋರಿದೆ.
110 ಕ್ಕೂ ಹೆಚ್ಚು ಕಂಪನಿಗಳು ಭಾಗಿ:
ಈ ಕುರಿತು ಪ್ರೆಸ್ಕ್ಲಬ್ನಲ್ಲಿ ಮೀನಾಕ್ಷಿ ಕೃಷ್ಣ ಭೈರೇಗೌಡ ಮಾತನಾಡಿ, "ಸತತವಾಗಿ ಕಳೆದ 5 ವರ್ಷಗಳಿಂದ ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಾ ಬಂದಿದೇವೆ. ಕರೋನಾ ಸಾಂಕ್ರಾಮಿಕದ ಕಾರಣ ಕಳೆದ ಎರಡು ವರ್ಷಗಳಿಂದ ಈ ಮೇಳವನ್ನು ಆಯೋಜಿಸಲು ಆಗಿರಲಿಲ್ಲ. ಈ ಬಾರಿ ಸಾಂಕ್ರಾಮಿಕ ಕಡಿಮೆ ಆಗಿರುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ," ಎಂದು ಹೇಳಿದರು.

ಕರೋನಾ ಲಾಕ್ಡೌನ್ ನಿಂದ ಬಹಳಷ್ಟು ಜನರು ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ವಿದ್ಯಾಭ್ಯಾಸ ಮುಗಿಸಿರುವ ಯುವಕ ಯುವತಿಯರಿಗೆ ಉತ್ತಮ ಅವಕಾಶ ಕಲ್ಪಿಸಿಕೊಡುವುದು ನಮ್ಮ ಉದ್ದೇಶವಾಗಿದೆ. ಕಳೆದ ನಾಲ್ಕು ಮೇಳದಲ್ಲಿ ಭಾಗವಹಿಸಿದ್ದ 17 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಈ ಬಾರಿ ಇನ್ಪೋಸಿಸ್ ಬಿಪಿಓ, ಅಪೊಲೋ, ಹೆಚ್ಡಿಎಫ್ಸಿ, ಎಸ್ಬಿಐ, ಎಲ್ಐಸಿ, ಟೆಕ್ ಮಹಿಂದ್ರ, ಐಸಿಐಸಿ, ರಿಯಲನ್ಸ್ ನಂತಹ 110 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 3 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳ ಲಭ್ಯತೆಯಿದೆ ಎಂದು ಹೇಳಿದರು.
ಕಾಂಗ್ರೆಸ್ ಬೆಂಗಳೂರು ಉತ್ತರದ ಪ್ರಧಾನ ಕಾರ್ಯದರ್ಶಿ ರಾಮಶಂಕರ್ ಹಾಜರಿದ್ದರು.
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications