Get Updates
Get notified of breaking news, exclusive insights, and must-see stories!

ಬೆಂಗಳೂರು: ಡ್ರೋನ್‌ ತರಬೇತಿ ಪಡೆಯುವವರಿಗೆ ಇದೇ ಉತ್ತಮ ಅವಕಶ; ಮಾಹಿತಿ ಇಲ್ಲಿದೆ

ಬೆಂಗಳೂರು, ನವೆಂಬರ್, 18: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಆಗಾಗ ಉದ್ಯೋಗವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಹಾಗೆಯೇ ಇದೀಗ 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5ರ ಒಳಗೆ https://kmdconline.karnataka.gov.in
ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Best Opportunity for Drone Training Enthusiasts Know Application submission date details

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0836-2748226ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇರ ನೇಮಕಾತಿ ಸಂದರ್ಶನ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ನವೆಂಬರ್ 21ರಂದು ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಹಾಗಾದರೆ, ಎಷ್ಟು ಗಂಟೆಗೆ ನಡೆಯಲಿದೆ ಹಾಗೂ ಸಂದರ್ಶನಕ್ಕೆ ಬರುವವರು ಯಾವೆಲ್ಲಾ ದಾಖಲೆಗಳನ್ನು ತರಬೇಕಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್‌ಎಸ್ಎಲ್‌ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 810 ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಆಯೋಜನೆ ಇವರಿಗೆ ಸಂಪರ್ಕಿಸಬಹುದಾಗಿದೆ.

ನ 16 ಮತ್ತು 17ರಂದು ಕೃಷಿಮೇಳ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ವತಿಯಿಂದ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನವೆಂಬರ್ 16 ಮತ್ತು 17ರಂದು ಎರಡು ದಿನಗಳ ಕಾಲ ಕೃಷಿಮೇಳ ಆಯೋಜಿಸಲಾಗಿದೆ.

ಈ ಕೃಷಿಮೇಳದ ಆಕರ್ಷಣೆಯಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪ್ರಾತ್ಯಕ್ಷೀಕೆಗಳು, ವಿವಿಧ ಬೆಳೆಗಳ ಸಂಶೋಧನಾ ಪ್ರಾತ್ಯಕ್ಷೀಕೆಗಳು, ಜೇನುಕೃಷಿ ಮತ್ತು ಕೀಟ ವಿಸ್ಮಯ, ಗ್ರಾಮೀಣ ಕೃಷಿ ಹವಾಮಾನ ಘಟಕ, ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಘಟಕ, ಕೃಷಿ ಸಂಬಂಧಿತ ವಸ್ತುಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಮಹತ್ವ, ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ, ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮಗಳು, ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಹಾಗೂ ಆಧುನಿಕ ಕೃಷಿ ಯಂತ್ರೋಪಕರಣಗಳ ಉಪಯೋಗ ಮತ್ತು ಬಳಕೆ ಕುರಿತು ತಾಂತ್ರಿಕ ಸಮಾವೇಶ ಜರುಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+