Government Recruitment: ಭರ್ತಿ ಆಗದ 2.5ಲಕ್ಷಕ್ಕೂ ಅಧಿಕ ಖಾಲಿ ಹುದ್ದೆಗಳು: ಯುವಕರಿಗೆ ಸರ್ಕಾರ ಚಿಪ್ಪು..BJP
Government Jobs Recruitment 2025: ಕರ್ನಾಟಕ ರಾಜ್ಯಾದ್ಯಂತ ಉದ್ಯೋಗಾಕಾಂಕ್ಷಿಗಳ ಇವತ್ತಲ್ಲ ನಾಳೆ ಸರ್ಕಾರದಿಂದ ಬೃಹತ್ ಮಟ್ಟದ ಉದ್ಯೋಗ ನೇಮಕಾತಿ ನಡೆಯಲಿದೆ ಎಂದು ಕಾಯುತ್ತಿದ್ದಾರೆ. ಆದರೆ ವರ್ಷಗಳು ಕಳೆದು ಖಾಲಿ ಇರುವ ಹುದ್ದೆಗಳಿಗೆ ಸೂಕ್ತ ರೀತಿಯಲ್ಲಿ ನೇಮಕಾತಿಗೆ ಆದೇಶ, ಅಧಿಸೂಚನೆ ಪ್ರಕಟವಾಗಿಲ್ಲ. ಇದೇ ವಿಚಾರ ಇಟ್ಟುಕೊಂಡು ರಾಜ್ಯ ಬಿಜೆಪಿಯು 2 ವರ್ಷದಿಂದ ನೇಮಕಾತಿ ಮಾಡದೇ ರಾಜ್ಯದ ಯುವಕರಿಗೆ ಕಾಂಗ್ರೆಸ್ ಸರ್ಕಾರ ಚಿಪ್ಪು ನೀಡಿದೆ ಎಂದು ಅಪಹಾಸ್ಯ ಮಾಡಿದೆ.
ಶುಕ್ರವಾರ ಕರ್ನಾಟಕ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕುರಿತಂತೆ ರಾಜ್ಯ ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2 ವರ್ಷದಿಂದ ನೇಮಕಾತಿ ಇಲ್ಲ. ಯುವಕರಿಗೆ ಉದ್ಯೋಗವಿಲ್ಲ. ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ದೂರಿದೆ.

ರಾಜ್ಯದಲ್ಲಿ ಒಟ್ಟು 2.5 ಲಕ್ಷಕ್ಕೂ ಅಧಿಕ ಸರ್ಕಾರ ಹುದ್ದೆಗಳು ಖಾಲಿ ಇವೆ. ಹೀಗಿದ್ದರೂ ಸಹ ಸರ್ಕಾರ ಅವುಗಳ ಭರ್ತಿ ಮಾಡಿ ಯುವ ಸಮೂಹದ ಬದುಕಿಗೆ ದಾರಿ ತೋರಿಸಲು ಮುಂದಾಗಿಲ್ಲ. ಹೆಚ್ಚುತ್ತಿರುವ ನಿರುದ್ಯೋಗ ನಿಯಂತ್ರಣಕ್ಕೆ ಸರ್ಕಾರದಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಎರಡು ವರ್ಷಗಳಲ್ಲಿ ಯುವಕರ ಕೈಗೆ ಚಿಪ್ಪು ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯುವಕರ ನೋವಿನ ಸಮಸ್ಯೆ ಆಲಿಸಿ. ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಿ, ಉದ್ಯೋಗಕಾಂಕ್ಷಿಗಳಿಗೆ ನ್ಯಾಯ ಒದಗಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ನಿಮಗಳಲ್ಲಿ ಒಂದಷ್ಟು ನೇಮಕಾತಿ ಮಾಡಿಕೊಂಡಿದ್ದಾಗಿ ಇತ್ತೀಚೆಗೆ ತಿಳಿಸಿದ್ದಾರೆ. ಇನ್ನೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರು ಅಗತ್ಯ ಹುದ್ದೆಗಳ ನೇಮಕಾತಿಗೆ ಮಾಡಿಕೊಳ್ಳಲಾಗುವುದು. '8500' ಕಾನ್ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದರು. ಈವರೆಗೆ ಆ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.
ನೆರೆ ಸಂತ್ರಸ್ತರ ಮರೆತ ಸರ್ಕಾರ
ತಿಂಗಳ ಹಿಂದಷ್ಟೆ ಉತ್ತರ ಕರ್ನಾಟಕದ ಕಲಬುರಗಿ, ಬೀದರ್ ಇತರ ಕಡೆಗಳಲ್ಲಿ ಅತೀವ ಮಳೆ, ಪ್ರವಾಹಕ್ಕೆ ಬೆಳೆದ ಬೆಳೆ ಹಾಳಾಗಿತ್ತು. ಜನ ಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರದ ಭರವಸೆ ನೀಡಿ ಒಂದು ತಿಂಗಳು ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಹೇಳಿ ಒಂದು ತಿಂಗಳು ಕಳೆದಿದೆ. ಸಂತ್ರಸ್ತರ ಖಾತೆಗೆ ಬಿಡಿಗಾಸು ಜಮೆ ಆಗಿಲ್ಲ. ಸ್ವಾಮಿ ಸಿದ್ದರಾಮಯ್ಯನವರೇ, ಕೊಟ್ಟ ಮಾತು ಮರೆಯಬೇಡಿ, ಕೂಡಲೇ ಪರಿಹಾರ ನೀಡಿ ಎಂದು ಬಿಜೆಪಿ ಒತ್ತಾಯಿಸಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications