BMTC: ಬಿಎಂಟಿಸಿಯಿಂದ ಉಚಿತ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
BMTC: ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಕೂಡ ಒಂದಾಗಿದೆ. ಇದೀಗ ಈ ಸಂಸ್ಥೆಯು ಉಚಿತ ಚಾಲನಾ ತರಬೇತಿ ನೀಡುವುದಕ್ಕಾಗಿ ಅರ್ಹ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ, ಅರ್ಜಿ ಸಲ್ಲಿಸಬಯಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಎಂಟಿಸಿಯು ಉಚಿತ ಚಾಲನಾ ತರಬೇತಿ ನೀಡುವುದಕ್ಕಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್ಸಿ, ಎಸ್ಪಿ (ಪರಿಶಿಷ್ಟ ಜಾತಿ ಉಪ ಯೋಜನೆ) ಹಾಗೂ ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಲಘು ಮತ್ತು ಭಾರೀ ವಾಹನಗಳ ಉಚಿತ ಚಾಲನಾ ತರಬೇತಿಯನ್ನು ಹಮ್ಮಿಕೊಂಡಿದೆ.

ಲಘು ಮತ್ತು ಭಾರೀ ವಾಹನಗಳ ಉಚಿತ ಚಾಲನಾ ತರಬೇತಿಯ ವೇಳೆ ವಸತಿ ಸಹಿತ ಹಾಗೂ ವಸತಿ ರಹಿತ ಇರುತ್ತದೆ. ತರಬೇತಿ ಅವಶ್ಯಕತೆ ಇರುವವರು ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿ ಮೊದಲ ಅವಕಾಶ ನೀಡಲಾಗುತ್ತದೆ. ವಸತಿ ಸಹಿತ ತರಬೇತಿ ವಸತಿ ಸೌಕರ್ಯ, ಊಟದ ವ್ಯವಸ್ಥೆಯನ್ನು ನೀಡಲಾಗುತ್ತದೆ.
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವರು 18 ವರ್ಷದಿಂದ 45 ವರ್ಷ ವಯಸ್ಸಿನ ಒಳಗಿನವರಾಗಿರಬೇಕು. ಭಾರೀ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವರು 20ರಿಂದ 45 ವರ್ಷದ ಒಳಗಿರಬೇಕು. ಜೊತೆಗೆ ಲಘು ವಾಹನ ಚಾಲನಾ ಅನುಜ್ಞಾ ಪತ್ರ ಪಡೆದು ಒಂದು ವರ್ಷ ಆಗಿರಬೇಕು. ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, 5 ಪಾಸ್ ಪೋಟೋಗಳು, ಬಿಎಂಟಿಸಿಯ ಉಚಿತ ಚಾಲನಾ ತರಬೇತಿಗೆ ಅಭ್ಯರ್ಥಿಗಳು ಹಾಜರಾಗುವಾಗ ದಾಖಲೆಗಳನ್ನು ಅಧಿಕಾರಿಗಳ ಮುಂದೆ ಹಾಜರು ಪಡಿಸಬೇಕು.
ಬೆಂಗಳೂರಿನ ವಡ್ಡರಹಳ್ಳಿ ತರಬೇತಿ ಕೇಂದ್ರಕ್ಕೆ ಹಾಜರಾಗುವ ವೇಳೆ ದಾಖಲೆಗಳನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸುವಾಗ ನೀಡಿದಂತೆ ದಾಖಲೆಗಳ ಮೂಲ ಪ್ರತಿಗಳು ಅರ್ಜಿಯ ಪ್ರತಿ ಜೊತೆಗೆ ಇರಬೇಕು. ನೀವು ನೀಡಿರುವ ದಾಖಲೆಗಳ ಒಂದು ಸೆಟ್ ಜೆರಾಕ್ಸ್ ತೆಗೆದುಕೊಂಡು ಹೋಗಿರಬೇಕು. ಅರ್ಜಿ ಸಲ್ಲಿಕೆ ಮಾಡಲು https://sevasindhuservices.karnataka.gov.in ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08022279954, 8792662816/8792662814 ಅಥವಾ http://www.mybmtc.gov.in ಭೇಟಿ ನೀಡಬಹುದಾಗಿದೆ.
-
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications